ಗಂಭೀರ್-ಸುನೀಲ್ ನರೈನ್ 
ಕ್ರಿಕೆಟ್

ಸುನೀಲ್ ನರೇನ್‌ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದೇಕೆ ಗೌತಮ್ ಗಂಭೀರ್‌!

ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಅವರ ನಾಯಕತ್ವವನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾಜಿ ಸಹಾಯಕ ಕೋಚ್‌ ವಿಜಯ್‌ ದಹಿಯಾ ಶ್ಲಾಘಿಸಿದ್ದಾರೆ.

ನವದೆಹಲಿ: ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಅವರ ನಾಯಕತ್ವವನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾಜಿ ಸಹಾಯಕ ಕೋಚ್‌ ವಿಜಯ್‌ ದಹಿಯಾ ಶ್ಲಾಘಿಸಿದ್ದಾರೆ.

ಸ್ಪೋರ್ಟ್‌ಕೀಡಾದ ಫೇಸ್‌ಬುಕ್‌ ಪೇಜ್‌ನಲ್ಲಿ ಶಾನಿವಿ ಸಾದನ ಅವರೊಂದಿಗೆ ಲೈವ್‌ ಚಾಟ್‌ನಲ್ಲಿ ಮಾತನಾಡಿದ ಅವರು, ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದ ಯಶಸ್ಸಿನಲ್ಲಿ ಗೌತಮ್‌ ಗಂಭೀರ್‌ ಅವರ ಪಾತ್ರವನ್ನು ಶ್ಲಾಘಿಸಿದರು ಹಾಗೂ ವೆಸ್ಟ್ ಇಂಡಿಸ್‌ ತಂಡದ ಹಿರಿಯ ಆಫ್‌ ಸ್ಪಿನ್ನರ್ ಸುನೀಲ್‌ ನರೇನ್‌ ಅವರನ್ನು ತಂಡಕ್ಕೆ ಕರೆದುಕೊಂಡ ಉದ್ದೇಶವನ್ನು ಬಹಿರಂಗಪಡಿಸಿದರು.

ಐಪಿಎಲ್‌ ಮೊದಲು ಮೂರು ಆವೃತ್ತಿಗಳಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದಿತ್ತು. 2011ರಲ್ಲಿ ಟೀಮ್‌ ಮ್ಯಾನೇಜ್‌ಮೆಂಟ್‌ ಗೌತಮ್‌ ಗಂಭೀರ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡು ನಾಯಕತ್ವವನ್ನು ನೀಡಿತ್ತು. ಅದೇ ವರ್ಷ ಮೊಟ್ಟ ಮೊದಲ ಬಾರಿ ಕೆಕೆಆರ್‌ ಪ್ಲೇ ಅಫ್‌ಗೆ ತಲುಪಿತ್ತು. ನಂತರ, 2012 ಮತ್ತು 2014ರ ಆವೃತ್ತಿಗಳಲ್ಲಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಗೌತಮ್‌ ಗಂಭೀರ್‌ ಅವರ ಆಕ್ರಮಣಕಾರಿ ನಾಯಕತ್ವ ತಂಡದ ಯಶಸ್ಸಿಗೆ ಕಾರಣವಾಗಿತ್ತು.

2012ರಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ಕೆಲ ಕ್ಷಣಗಳನ್ನು ವಿಜಯ್ ದಹಿಯಾ ಮೆಲುಕು ಹಾಕಿದರು. ಭಾರತ ತಂಡ, ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದ ವೇಳೆ, ಗೌತಮ್‌ ಗಂಭೀರ್‌ ನನಗೆ ಕರೆ ಮಾಡಿ, ಎಷ್ಟು ಬೆಲೆಯಾದರೂ ಪರವಾಗಿಲ್ಲ ಸುನೀಲ್‌ ನರೇನ್‌ ಬೇಕು ಎಂದು ಹೇಳಿದ್ದರು. ಅದರಂತೆ, ವೆಸ್ಟ್ ಇಂಡೀಸ್‌ ಸ್ಪಿನ್ನರ್‌ 110 ಐಪಿಎಲ್‌ ಪಂದ್ಯಗಳಿಂದ 122 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಹಾಗೂ ಎರಡು ಬಾರಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಕಳೆದ ಆವೃತ್ತಿಗಳಲ್ಲಿ ಅವರನ್ನು ಅಗ್ರ ಕ್ರಮಾಂಕದಲ್ಲಿ ಆಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT