ಐಪಿಎಲ್ ಟ್ರೋಫಿ 
ಕ್ರಿಕೆಟ್

ಕೊರೋನಾ ವೈರಸ್ ಎಫೆಕ್ಟ್: ಮತ್ತೆ ವಿದೇಶದಲ್ಲಿ ಐಪಿಎಲ್ ಆಯೋಜನೆ?

ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಂದಾಗಿ ಸ್ಥಗಿತವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಭಾರತದಿಂದ ಆಚೆ ಅಂದರೆ ವಿದೇಶದಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ನವದೆಹಲಿ: ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಂದಾಗಿ ಸ್ಥಗಿತವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಭಾರತದಿಂದ ಆಚೆ ಅಂದರೆ ವಿದೇಶದಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಹಿಂದೆಯೇ ಬಿಸಿಸಿಐ ಐಪಿಎಲ್ ಆಯೋಜನೆ ಕುರಿತು ಇರುವ ಎಲ್ಲ ಆಯ್ಕೆಗಳನ್ನೂ ಪರಿಶೀಲಿಸುವುದಾಗಿ ಹೇಳಿತ್ತು. ಅದರಂತೆ ಇದೀಗ ವಿದೇಶದಲ್ಲಿ ಐಪಿಎಲ್ ಟೂರ್ನಿ ಆಯೋಜನೆ ಮಾಡುವತ್ತ ಬಿಸಿಸಿಐ ಚಿಂತನೆಯಲ್ಲಿ ತೊಡಗಿದೆ. ಬಿಸಿಸಿಐ ಮೂಲಗಳ ಪ್ರಕಾರ ಟಿ20 ವಿಶ್ವಕಪ್ ಟೂರ್ನಿಯನ್ನಿ ಐಸಿಸಿ ಮುಂದೂಡಿರುವುದರಿಂದ ಐಪಿಎಲ್ ಆಯೋಜನೆಗೆ ಬಿಸಿಸಿಐಗೆ ಅವಕಾಶ ಸಿಕ್ಕಂತಾಗಿದೆ. ಆದರೆ ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಜೋರಾಗಿದ್ದು, ಇದು ಬಿಸಿಸಿಐ ಪ್ರಯತ್ನಕ್ಕೆ ಹಿನ್ನಡೆಯುನ್ನುಂಟು ಮಾಡಿದೆ.

ಕೊರೋನಾ ಹಿನ್ನಲೆಯಲ್ಲಿ ಐಪಿಎಲ್ ಟೂರ್ನಿಯನ್ನು ರದ್ದು ಮಾಡುವ ಪರಿಸ್ಥಿತಿಯಲ್ಲಂತೂ ಬಿಸಿಸಿಐ ಇಲ್ಲ. ಕಾರಣ ಟೂರ್ನಿ ರದ್ದಾದರೆ ಬಿಸಿಸಿಐಗೆ 4 ಸಾವಿರ ಕೋಟಿ ರೂ ನಷ್ಟವಾಗಲಿದೆ. ಹೀಗಾಗಿ ಬಿಸಿಸಿಐ ಟೂರ್ನಿ ರದ್ದು ಮಾಡುವ ದುಸ್ಸಾಹಸಕ್ಕೆ ಕೈಹಾಕದು.  ಕೊರೋನಾ ವೈರಸ್ ಹೊರತಾಗಿಯೂ ಟೂರ್ನಿ ಆಯೋಜನೆಗೆ ಇರುವ ಎಲ್ಲ ಅವಕಾಶಗಳನ್ನೂ ಬಿಸಿಸಿಐ ಎದುರು ನೋಡುತ್ತಿದೆ. ಈ ಹಿಂದೆ 2009ರಲ್ಲಿ ಲೋಕಸಭಾ ಚುನಾವಣೆಯಿಂದಾಗಿ ಮೊದಲ ಬಾರಿಗೆ ಐಪಿಎಲ್ ನಲ್ಲಿ ವಿದೇಶದಲ್ಲಿ ನಡೆಸಲಾಗಿತ್ತು. ಅಂದು ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಐಪಿಎಲ್ ಗೆ ವೇದಿಕೆಯಾಗಿತ್ತು. ಬಳಿಕ 2014ರಲ್ಲಿ ಭಾರತ ಮತ್ತು ಯುಎಇಯಲ್ಲಿ ನಡೆಸಲಾಗಿತ್ತು. ಈಗಲೂ ಸಹ ಬಿಸಿಸಿಐ ಇಂತಹುದೇ ದಾರಿಯನ್ನು ಹುಡುಕುತ್ತಿದೆ ಎನ್ನಲಾಗಿದೆ. ಇದಕ್ಕೆ ಇಂಬು ನೀಡುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಐಪಿಎಲ್ ಆಯೋಜಿಸುವ ಕುರಿತು ಬಿಸಿಸಿಐಗೆ ಆಹ್ವಾನ ನೀಡಿದೆ. 

ಐಸಿಸಿ ನಿರ್ಣಯದ ಮೇಲೆ ಐಪಿಎಲ್ ಭವಿಷ್ಯ
ಇನ್ನು ಕೊರೋನಾ ಸಾಂಕ್ರಾಮಿಕದ ನಡುವೆ ಕ್ರಿಕೆಟ್ ಆಯೋಜನೆ ಕುರಿತು ಅಂತಾರಾಷ್ಟ್ಪೀಯ ಕ್ರಿಕೆಟ್ ಸಮಿತಿ-ಐಸಿಸಿ ಕೈಗೊಳ್ಳುವ ನಿರ್ಣಯವೇ ಪ್ರಮುಖವಾಗಿದ್ದು, ಜೂನ್ ರವರೆಗೂ ಐಸಿಸಿ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಟಿ20 ವಿಶ್ವಕಪ್ ಮತ್ತು ಕ್ರಿಕೆಟ್ ಚಟುವಟಿಕೆಗಳಿಗೆ ಚಾಲನೆ ನೀಡುವ ಕುರಿತು ಐಸಿಸಿ ನಿರ್ಣಯವನ್ನು ಬಿಸಿಸಿಐ ಕಾದು ನೋಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT