ರಾಬಿನ್ ಉತ್ತಪ್ಪ 
ಕ್ರಿಕೆಟ್

ಆತ್ಮಹತ್ಯೆಗೆ ಆಲೋಚಿಸಿದ್ದೆ, ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ: ಜೀವನದ ಕಹಿ ಸತ್ಯ ಬಿಚ್ಚಿಟ್ಟ ರಾಬಿನ್‌ ಉತ್ತಪ್ಪ

ಟೀಂ ಇಂಡಿಯಾ ಅನುಭವಿ ಆಟಗಾರ, ಕನ್ನಡಿಗ ರಾಬಿನ್‌ ಉತ್ತಪ್ಪ ಅವರು ಕ್ರಿಕೆಟ್ ಮತ್ತು ತಮ್ಮ ಜೀವನದ ಕೆಟ್ಟ ಸಮವನ್ನು ನೆನಪಿಸಿಕೊಂಡಿದ್ದು, 2009ರಿಂದ 2011ರವರೆಗಿನ ಅವಧಿ ತಮ್ಮ ಪಾಲಿಗೆ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ನವದೆಹಲಿ: ಟೀಂ ಇಂಡಿಯಾ ಅನುಭವಿ ಆಟಗಾರ, ಕನ್ನಡಿಗ ರಾಬಿನ್‌ ಉತ್ತಪ್ಪ ಅವರು ಕ್ರಿಕೆಟ್ ಮತ್ತು ತಮ್ಮ ಜೀವನದ ಕೆಟ್ಟ ಸಮವನ್ನು ನೆನಪಿಸಿಕೊಂಡಿದ್ದು, 2009ರಿಂದ 2011ರವರೆಗಿನ ಅವಧಿ ತಮ್ಮ ಪಾಲಿಗೆ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ರಾಯಲ್ ರಾಜಸ್ಥಾನ್ ಫೌಂಡೇಶನ್‍ನ ‘ಮೈಂಡ್, ಬಾಡಿ ಅಂಡ್ ಸೋಲ್’ ಎಂಬ ಲೈವ್ ಸಂವಾದದಲ್ಲಿ ಮಾತನಾಡಿದ ರಾಬಿನ್ ಉತ್ತಪ್ಪ, 2009ರಿಂದ 2011ರ ಅವಧಿಯಲ್ಲಿ ನಾನು ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ ಮತ್ತು ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿದ್ದೆ ಎಂಬ ಆಘಾತಕಾರಿ ವಿಚಾರವನ್ನು ಬಾಯ್ಬಿಟ್ಟಿದ್ದಾರೆ.

2006ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದಾಗ ನನ್ನ ಬಗ್ಗೆ ನನಗೆ ಹೆಚ್ಚು ತಿಳಿದಿರಲಿಲ್ಲ. ಅಂದಿನಿಂದ ಹಲವು ಬೆಳವಣಿಗೆಗಳು ಮತ್ತು ಪಾಠಗಳನ್ನು ಕಂಡಿದ್ದೇನೆ ಕಲಿತಿದ್ದೇನೆ. ಈಗ ನನ್ನ ಬಗ್ಗೆ ಬಹಳ ಸ್ಪಷ್ಟತೆ ಇದೆ. ಏನು ಮಾಡಬೇಕು ಏನು ಮಾಡಬಾರದು ಎಂಬುದರ ಅರಿವಿದೆ. ಎಲ್ಲಾದರೂ ನಾನು ಕಾಲು ಜಾರುತ್ತಿದ್ದೇನೆ ಎಂದೆನಿಸಿದರೆ ಅಲ್ಲಿಯೇ ಸರಿ ಪಡಿಸಿಕೊಳ್ಳುವಷ್ಟು ಅರಿವು ನನ್ನಲ್ಲಿದೆ," ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

2009ರಿಂದ 2011ರ ಅವಧಿ ನಾನು ಪ್ರತಿದಿನ ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದ ಕಾಲಘಟ್ಟ. ಅಂದು ಅನುಭವಿಸಿದ ನೋವು ಇಂದಿಗೂ ನನಗೆ ನೆನಪಿದೆ. ಆಗ ಕ್ರಿಕೆಟ್ ಬಗ್ಗೆ ಸ್ವಲ್ಪ ಯೋಚಿಸುತ್ತಿದ್ದೆ, ಮುಂದೆ ಏನಾಗುತ್ತೆ? ನನ್ನ ಜೀವನದಲ್ಲಿ ಏನಾಗುತ್ತಿದೆ ಮತ್ತು ಯಾವ ದಿಕ್ಕಿನಲ್ಲಿ ಹೋಗುತ್ತಿದ್ದೇನೆ” ಎಂಬ ನೂರೆಂಟು ಪ್ರಶ್ನೆಗಳು ಕಾಡಿದ ಕಾಲವದು ಎಂದು ಉತ್ತಪ್ಪ ನೆನೆದಿದ್ದಾರೆ.

ಕ್ರಿಕೆಟ್‌ನ ವಿರಾಮದ ದಿನಗಳಲ್ಲಿ ಕಾಲ ಕಳೆಯುವುದು ಬಹಳ ಕಷ್ಟವಾಗಿತ್ತು. ಒಂದು ದಿನ ಒಂದು ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆಯನ್ನೂ ಮಾಡಿದ್ದೆ. ಆದರೆ ಹೇಗೋ ನನ್ನನ್ನು ನಾನೇ ತಡೆದು ನಿಲ್ಲಿಸಿದ್ದೆ ಎಂದಿದ್ದಾರೆ.

2007ರ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ ರಾಬಿನ್ ಉತ್ತಪ್ಪ ಅವರು, ಟೀಮ್‌ ಇಂಡಿಯಾ ಪರ ಈವರೆಗೆ 46 ಏಕದಿನ ಕ್ರಿಕೆಟ್‌ ಪಂದ್ಯಗಳನ್ನು ಆಡಿದ್ದು, 13 ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲೂ ಬ್ಯಾಟ್‌ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಲಯಾಳಂ ನಟಿ ಮೇಲೆ ಹತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

SCROLL FOR NEXT