ಡರೇನ್ ಸ್ವಾಮಿ 
ಕ್ರಿಕೆಟ್

ಐಪಿಎಲ್ ವೇಳೆ ಜನಾಂಗೀಯ ನಿಂದನೆ: 'ಕಾಲೂ' ಎಂದರೆ ಕರಿಯ ಎಂದರ್ಥವೆಂದು ಈಗ ತಿಳಿದೆ: ಡರೆನ್‌ ಸಾಮಿ ಆಕ್ರೋಶ

ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ಆಡುವಾಗ ತಮ್ಮನ್ನು ಕರಿಯ ಎಂದು ಕರೆಯುತ್ತಿದ್ದರು ಎಂದು ವೆಸ್ಟ್‌ ಇಂಡೀಸ್‌ ತಂಡದ ಮಾಜಿ ನಾಯಕ ಡರೆನ್ ಸಾಮಿ ಇದೀಗ ಆಕ್ರೋಶ ಹೊರಹಾಕಿದ್ದಾರೆ.

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ಆಡುವಾಗ ತಮ್ಮನ್ನು ಕರಿಯ ಎಂದು ಕರೆಯುತ್ತಿದ್ದರು ಎಂದು ವೆಸ್ಟ್‌ ಇಂಡೀಸ್‌ ತಂಡದ ಮಾಜಿ ನಾಯಕ ಡರೆನ್ ಸಾಮಿ ಇದೀಗ ಆಕ್ರೋಶ ಹೊರಹಾಕಿದ್ದಾರೆ.

ಸನ್‌ರೈಸರ್ಸ್‌ ತಂಡದ ಯಶಸ್ವಿ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದ ಡರೆನ್‌ ಸಾಮಿ ಅವರನ್ನು 'ಕಾಲೂ' ಅಂದರೆ 'ಕರಿಯ' ಎಂಬ ಹೆಸರಿನಿಂದ ಕರೆಯುತ್ತಿದ್ದರು. ಇದರ ಅರ್ಥ ಕರಿಯ ಎಂಬುದು ತಮಗೆ ಇದೀಗ ತಿಳಿದಿದೆ ಎಂದು ಸಾಮಿ ಅಸಮಾಧಾನ ಹೊರಹಾಕಿದ್ದಾರೆ.

ಐಪಿಎಲ್ ಆಡುತ್ತಿದ್ದಾಗ ಜನಾಂಗೀಯ ನಿಂದನೆ ಎದುರಿಸಿದ್ದೆ: ಸಾಮಿ
ಐಪಿಎಲ್ ಸಮಯದಲ್ಲಿ ಶ್ರೀಲಂಕಾದ ತಿಸಾರ ಪೆರೆರಾ ಮತ್ತು ವೆಸ್ಟ್ ಇಂಡೀಸ್‌ನ ಮಾಜಿ ಆಟಗಾರ ಸನ್‌ರೈಸರ್ಸ್ ಹೈದರಾಬಾದ್‌ನ ಡರೆನ್ ಸಾಮಿ ಜನಾಂಗೀಯ ನಿಂದನೆ ಎದುರಿಸಿದ್ದಾಗಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಅಮೆರಿಕದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಕಪ್ಪು ಪ್ರಜೆ ಜಾರ್ಜ್ ಫ್ಲಾಯ್ಡ್ ಸಾವಿನ ನಂತರ, ಕ್ರೀಡಾ ಜಗತ್ತಿನಲ್ಲಿ ವರ್ಣಭೇದ ನೀತಿಯನ್ನು ಕೊನೆಗೊಳಿಸಲು ದೊಡ್ಡ ಧ್ವನಿ ಎತ್ತಲಾಗಿದೆ. ಸ್ಯಾಮಿ ಕೂಡ ಈ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಇದರ ವಿರುದ್ಧ ಧ್ವನಿ ಎತ್ತಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT