ಸಚಿನ್ ತೆಂಡೂಲ್ಕರ್-ಸುನೀಲ್ ಗವಾಸ್ಕರ್ 
ಕ್ರಿಕೆಟ್

ಮತ್ತೊಬ್ಬ ಗವಾಸ್ಕರ್‌-ತೆಂಡೂಲ್ಕರ್‌ ರೂಪಿಸುವುದು ಅಸಾಧ್ಯ: ಪಾಕ್ ಮಾಜಿ ಕ್ರಿಕೆಟಿಗ ಮಿಯಾಂದಾದ್‌

ಭಾರತೀಯ ಕ್ರಿಕೆಟ್‌ ಕಂಡ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಸುನೀಲ್‌ ಗವಾಸ್ಕರ್‌ ಕೂಡ ಒಬ್ಬರು. ಅವರು 1987ರಲ್ಲಿ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿದ್ದಂತೆ ಭಾರತೀಯ ಅಭಿಮಾನಿಗಳು ಒಬ್ಬ ಅದ್ಭುತ ಆಟಗಾರನನ್ನು ಕಳೆದುಕೊಳ್ಳುತ್ತಿದ್ದೇವೆಂದು ಕಣ್ಣೀರು ಹಾಕಿದ್ದರು.

ನವದೆಹಲಿ: ಭಾರತೀಯ ಕ್ರಿಕೆಟ್‌ ಕಂಡ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಸುನೀಲ್‌ ಗವಾಸ್ಕರ್‌ ಕೂಡ ಒಬ್ಬರು. ಅವರು 1987ರಲ್ಲಿ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿದ್ದಂತೆ ಭಾರತೀಯ ಅಭಿಮಾನಿಗಳು ಒಬ್ಬ ಅದ್ಭುತ ಆಟಗಾರನನ್ನು ಕಳೆದುಕೊಳ್ಳುತ್ತಿದ್ದೇವೆಂದು ಕಣ್ಣೀರು ಹಾಕಿದ್ದರು. ಭಾರತ ತಂಡದಲ್ಲಿ ಗವಾಸ್ಕರ್ ಇಲ್ಲ ಎಂಬ ನೋವು ಕೆಲವು ವರ್ಷಗಳ ಕಾಲ ಅಭಿಮಾನಿಗಳಲ್ಲಿ ಇತ್ತು.

16ನೇ ವಯಸ್ಸಿನಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಟೀಮ್‌ ಇಂಡಿಯಾಗೆ ಆಗಮಿಸುವವರೆಗೂ ಗವಾಸ್ಕರ್‌ ಇಲ್ಲದ ಕೊರಗು ತಂಡದಲ್ಲಿತ್ತು. 1989ರಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸಚಿನ್‌ ತೆಂಡೂಲ್ಕರ್ ಪದಾರ್ಪಣೆ ಮಾಡಿದರು. ನಂತರ, 90 ದಶಕದ ಆರಂಭದಲ್ಲಿ ಸಚಿನ್‌, ಹಂತ-ಹಂತವಾಗಿ ತಂಡದಲ್ಲಿ ಗುರುತಿಸಿಕೊಂಡರು.

ತಮ್ಮ ವಿಶಿಷ್ಠ ಶೈಲಿಯ ಬ್ಯಾಟಿಂಗ್‌ ಮೂಲಕ ಎಲ್ಲರ ಚಿತ್ತ ಕದ್ದ ಕ್ರಿಕೆಟ್‌ ದೇವರು, ಇಡೀ ವಿಶ್ವದಲ್ಲಿಯೇ ಅಭಿಮಾನಿಗಳನ್ನು ಸಂಪಾದಿಸಿದರು. ಬಳಿಕ 2000 ಇಸವಿಯ ಹೊತ್ತಿಗೆ ವಿಶ್ವ ಕ್ರಿಕೆಟ್‌ ಅನ್ನು ಆಳಿದರು. ಎರಡು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಹಲವಾರು ದಾಖಲೆಗಳನ್ನು ಮಾಡಿದ ಸಚಿನ್‌, 2013ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!