ಶ್ರೀಶಾಂತ್ 
ಕ್ರಿಕೆಟ್

ಮುಗಿದ ಕರಾಳ ವನವಾಸ: ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್‌ಗೆ ಸ್ಥಾನ ಖಚಿತ

ವಿವಾದಿತ ಕ್ರಿಕೆಟಿಗ ಎಸ್. ಶ್ರೀಶಾಂತ್‌ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡುವ ದಿನ ಹತ್ತಿರವಾದಂತ್ತಿದೆ.

ಕೊಚ್ಚಿ: ವಿವಾದಿತ ಕ್ರಿಕೆಟಿಗ ಎಸ್. ಶ್ರೀಶಾಂತ್‌ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡುವ ದಿನ ಹತ್ತಿರವಾದಂತ್ತಿದೆ. ಕೇರಳ ಎಕ್ಸ್‌ಪ್ರೆಸ್‌ ಖ್ಯಾತಿಯ ಬಲಗೈ ವೇಗಿಯ ವಿರುದ್ದದ ನಿಷೇಧ ಅವಧಿ ಅಂತ್ಯಗೊಳ್ಳಲಿದ್ದು, ಸೆಪ್ಟೆಂಬರ್‌ನಲ್ಲಿ ಪ್ರಕಟಿಸಲಾಗುವ ರಾಜ್ಯ ರಣಜಿ ಕ್ರಿಕೆಟ್‌ ತಂಡದಲ್ಲಿ ಸ್ಥಾನ ನೀಡಲು ಕೇರಳ ಕ್ರಿಕೆಟ್‌ ಸಂಸ್ಥೆ ನಿರ್ಧರಿಸಿದೆ.

2013ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡದ ಪರ ಐಪಿಎಲ್‌ ಟೂರ್ನಿಯಲ್ಲಿ ಆಡುತ್ತಿದ್ದ ಎಸ್‌ ಶ್ರೀಶಾಂತ್‌ ಮತ್ತು ರಾಯಲ್ಸ್‌ ತಂಡದ ಸಹ ಆಟಗಾರರಾದ ಅಜಿತ್‌ ಚಾಂಡೇಲಾ ಮತ್ತು ಅಂಕಿತ್‌ ಚವಾಣ್ ಅವರನ್ನು ದೆಹಲಿ ಪೊಲೀಸರು ಸ್ಪಾಟ್‌ ಫಿಕ್ಸಿಂಗ್‌ ನಡೆಸಿರುವ ಆರೋಪದ ಮೇರೆಗೆ ಬಂಧಿಸಿದ್ದರು. ಬಳಿಕ ಈ ಕ್ರಿಕೆಟಿಗರ ವಿರುದ್ಧ ಬಿಸಿಸಿಐ ಆಜೀವ ನಿಷೇಧ ಹೇರಿತ್ತು.

ತಾವು ನಿರಪರಾಧಿ ಎಂದು ಶ್ರೀಶಾಂತ್‌ ನಡೆಸಿದ ಕಾನೂನು ಸಮರದ ಫಲವಾಗಿ 2015ರಲ್ಲಿ ದಿಲ್ಲಿ ನ್ಯಾಯಾಲಯ ಅವರನ್ನು ಆರೋಪ ಮುಕ್ತರನ್ನಾಗಿಸಿತ್ತು. ಆದರೆ ಬಿಸಿಸಿಐ ಹೇರಿದ್ದ ನಿಷೇಧ ಮುಂದುವರಿದಿತ್ತು. ನಂತರ 2018ರಲ್ಲಿ ಕೇರಳ ಹೈ ಕೋರ್ಟ್ಸ್‌ ಶ್ರೀಶಾಂತ್‌ ವಿರುದ್ಧ ನಿಷೇಧ ತೆಗೆಯುವಂತೆ ಬಿಸಿಸಿಐಗೆ ಆದೇಶಿಸಿತ್ತು. ನಂತರ 2019ರಲ್ಲಿ ಸುಪ್ರೀಂ ಕೋರ್ಟ್‌ ಶ್ರೀಶಾಂತ್‌ ತಪ್ಪನ್ನು ಎತ್ತಿ ಹಿಡಿಯಿತಾದರೂ, ಬಿಸಿಸಿಐಗೆ ನಿಷೇಧ ಶಿಕ್ಷೆ ಕಡಿಮೆ ಮಾಡುವಂತೆ ಆದೇಶಿಸಿತ್ತು. ಇದರೊಂದಿಗೆ 2020ರ ಸೆಪ್ಟೆಂಬರ್‌ಗೆ 37 ವರ್ಷದ ಅನುಭವಿ ವೇಗಿಯ ವಿರುದ್ಧದ ನಿಷೇಧ ಕೊನೆಗೊಳ್ಳಲಿದೆ.

"ಅವಕಾಶ ನೀಡಲು ಮುಂದಾಗಿರುವ ಕೇರಳ ಕ್ರಿಕೆಟ್‌ ಸಂಸ್ಥೆಯ ಋಣದಲ್ಲಿ ನಾನಿದ್ದೇನೆ. ನನ್ನ ಫಿಟ್ನೆಸ್‌ ಸಾಬೀತು ಪಡಿಸಿ ಭರ್ಜರಿ ಕಮ್‌ಬ್ಯಾಕ್‌ ಮಾಡಲಿದ್ದೇನೆ. ಎಲ್ಲಾ ವಿವಾದಗಳು ವಿಶ್ರಾಂತಿ ತೆಗೆದುಕೊಳ್ಳುವ ಸಮಯವಿದ್ದು," ಎಂದು ಶ್ರೀಶಾಂತ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT