ಸಂಗ್ರಹ ಚಿತ್ರ 
ಕ್ರಿಕೆಟ್

ಏಕದಿನ ಕ್ರಿಕೆಟ್ ವಿಶ್ವಕಪ್: ಪಂದ್ಯ ಟೈ ಆದರೆ ಸೂಪರ್‌ ಓವರ್‌ ಬೇಡ.. ಜಂಟಿಯಾಗಿ ಪ್ರಶಸ್ತಿ ನೀಡಿ- ರಾಸ್ ಟೇಲರ್

ವಿಶ್ವಕಪ್ ನಂತಹ ಮಹತ್ವದ ಟೂರ್ನಿಗಳಲ್ಲಿ ಫೈನಲ್ ಪಂದ್ಯ ಟೈ ಆದರೆ ವಿಜೇತರನ್ನು ಘೋಷಿಸಲು ಸೂಪರ್ ಓವರ್ ಬೇಡ.. ಬದಲಿಗೆ ಎರಡೂ ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಬೇಕು ಎಂದು ನ್ಯೂಜಿಲೆಂಡ್‌ ತಂಡದ ಅನುಭವಿ ಆಟಗಾರ ರಾಸ್‌ ಟೇಲರ್‌ ಅಭಿಪ್ರಾಯ ಪಟ್ಟಿದ್ದಾರೆ.

ನವದೆಹಲಿ: ವಿಶ್ವಕಪ್ ನಂತಹ ಮಹತ್ವದ ಟೂರ್ನಿಗಳಲ್ಲಿ ಫೈನಲ್ ಪಂದ್ಯ ಟೈ ಆದರೆ ವಿಜೇತರನ್ನು ಘೋಷಿಸಲು ಸೂಪರ್ ಓವರ್ ಬೇಡ.. ಬದಲಿಗೆ ಎರಡೂ ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಬೇಕು ಎಂದು ನ್ಯೂಜಿಲೆಂಡ್‌ ತಂಡದ ಅನುಭವಿ ಆಟಗಾರ ರಾಸ್‌ ಟೇಲರ್‌ ಅಭಿಪ್ರಾಯ ಪಟ್ಟಿದ್ದಾರೆ.

ಇಎಸ್‌ಪಿಎನ್‌ ಕ್ರಿಕ್‌ ಇನ್ಫೊ ಜೊತೆಗಿನ ಸಂವಾದದಲ್ಲಿ  ಮಾತನಾಡಿದ ರಾಸ್ ಟೇಲರ್ ಇಂಗ್ಲೆಂಡ್ ಜೊತೆಗಿನ ವಿಶ್ವಕಪ್ ಫೈನಲ್ ಪಂದ್ಯದ ಕಹಿ ನೆನಪನ್ನು ಸ್ಮರಿಸಿಕೊಂಡರು. 'ಏಕದಿನ ವಿಶ್ವಕಪ್‌ನ ಫೈನಲ್‌ ಪಂದ್ಯವು ಟೈ ಆದ ಬಳಿಕ ನಾನು ಅಂಪೈರ್‌ಗಳ ಕೈಕುಲುಕಲು ಹೋಗಿದ್ದೆ. ಇನ್ನೂ ‘ಸೂಪರ್ ‌ಓವರ್‌’ ಬಾಕಿ ಇದೆ ಎಂಬುದು ನನಗೆ ಅರಿವಾಗಿದ್ದು ಆಗಲೇ. ಅಲ್ಲಿಯವರೆಗೂ ಅದರ ಕಲ್ಪನೆಯೇ ಇರಲಿಲ್ಲ’ ಎಂದು ಟೇಲರ್ ಹೇಳಿದರು.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್‌ ಮುಖಾಮುಖಿಯಾಗಿದ್ದವು. ನಿಗದಿತ ಓವರ್‌ಗಳ (50) ಆಟ ಮುಗಿದಾಗ ಪಂದ್ಯ ‘ಟೈ’ ಆಗಿತ್ತು. ಸೂಪರ್‌ ಓವರ್‌ ಕೂಡ ‘ಟೈ’ ಆಗಿತ್ತು. ಹೀಗಾಗಿ ಅತಿ ಹೆಚ್ಚು ಬೌಂಡರಿ ಗಳಿಸಿದ್ದ (ಬೌಂಡರಿ ಕೌಂಟ್‌) ಇಂಗ್ಲೆಂಡ್‌ ತಂಡವನ್ನು ಚಾಂಪಿಯನ್‌ ಎಂದು ಘೋಷಿಸಲಾಗಿತ್ತು. ಐಸಿಸಿ ಈ ನಿಯಮವನ್ನು ಹಲವರು ಟೀಕಿಸಿದ್ದರು. ಬಳಿಕ ಐಸಿಸಿ ಕೂಡ ಈ ನಿಯಮವನ್ನು ತೆಗೆದು ಹಾಕಿತ್ತು.

ಇದೀಗ ಇದೇ ವಿಚಾರವಾಗಿ ಟೇಲರ್ ಮಾತನಾಡಿದ್ದು, 'ವಿಶ್ವಕಪ್‌ನಂತಹ ಮಹತ್ವದ ಟೂರ್ನಿಯಲ್ಲಿ ಫೈನಲ್‌ ಪಂದ್ಯವು ಟೈ ಆದರೆ ಉಭಯ ತಂಡಗಳಿಗೂ ಜಂಟಿಯಾಗಿ ಪ್ರಶಸ್ತಿ ನೀಡಬೇಕು. ಏಕದಿನ ಮಾದರಿಯಲ್ಲಿ ‘ಸೂಪರ್‌ ಓವರ್‌’ ಅಗತ್ಯವೇ ಇಲ್ಲ ಎಂದು ಹೇಳಿದರು.

'ಏಕದಿನ ಪಂದ್ಯವು ಟೈ ಆದರೆ ಆ ಫಲಿತಾಂಶವೇ ಅಂತಿಮವಾಗಬೇಕು. ವಿಜೇತರನ್ನು ನಿರ್ಧರಿಸಲು ಸೂಪರ್‌ ಓವರ್‌ ಆಡಿಸುವುದರಲ್ಲಿ ಅರ್ಥವಿಲ್ಲ. ಟ್ವೆಂಟಿ–20 ಮಾದರಿಯ ಪಂದ್ಯದಲ್ಲಿ ಫಲಿತಾಂಶ ಬರುವವರೆಗೂ ‘ಸೂಪರ್‌ ಓವರ್‌’ ಆಡಿಸಬಹುದು. ಅದಕ್ಕೆ ನನ್ನ ಅಭ್ಯಂತರವೇನೂ ಇಲ್ಲ. ಏಕದಿನ ಮಾದರಿಯು ಸುದೀರ್ಘವಾದುದು. ಅದಕ್ಕೆ ಈ ನಿಯಮ ಸರಿಹೊಂದುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT