ನೆಸ್ ವಾಡಿಯಾ 
ಕ್ರಿಕೆಟ್

ಐಪಿಎಲ್ ನಲ್ಲಿ ಚೀನೀ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆಗೊಳಿಸಬೇಕು: ಕಿಂಗ್ಸ್ ಇಲೆವೆನ್ ಮಾಲೀಕ ನೆಸ್ ವಾಡಿಯಾ

ಈ ತಿಂಗಳ ಆರಂಭದಲ್ಲಿ ಪೂರ್ವ ಲಡಾಕ್‌ನಲ್ಲಿ ನಡೆದ ಚೀನಾದೊಂದಿಗಿನ ಸಂಘರ್ಷದಿಂದಾಗಿ  ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸಹ ಮಾಲೀಕ ನೆಸ್ ವಾಡಿಯಾ ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೀನಾದ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆ ಮಾಡಬೇಕೆಂದು ಕರೆ ನೀಡಿದರು. 

ಈ ತಿಂಗಳ ಆರಂಭದಲ್ಲಿ ಪೂರ್ವ ಲಡಾಕ್‌ನಲ್ಲಿ ನಡೆದ ಚೀನಾದೊಂದಿಗಿನ ಸಂಘರ್ಷದಿಂದಾಗಿ  ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸಹ ಮಾಲೀಕ ನೆಸ್ ವಾಡಿಯಾ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೀನಾದ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆ ಮಾಡಬೇಕೆಂದು ಕರೆ ನೀಡಿದರು. 

ಜೂನ್ 15 ರಂದು ನಡೆದ ಗಲ್ವಾನ್ ವ್ಯಾಲಿ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಕುರಿತು ಹೆಚ್ಚು ಹೆಚ್ಚು ಒತ್ತಾಯ ಕೇಳಿಬರುತ್ತಿದೆ.

ಚೀನಿಯರು ಇಲ್ಲಿಯವರೆಗೆ ತಾವು ಎಷ್ಟು ಮಂದಿ ಸಾವನ್ನಪ್ಪಿದ್ದಾರೆಂದು ಬಹಿರಂಗಪಡಿಸಿಲ್ಲ. ಈ ಘಟನೆ ಐಪಿಎಲ್ ನಲ್ಲಿ  ಚೀನಾದ ಪ್ರಾಯೋಜಕತ್ವವನ್ನು ಪರಿಶೀಲಿಸಲು ಬಿಸಿಸಿಐಗೆ ಪ್ರೇರಣೆ ನೀಡಿದೆ.ಸೋಮವಾರ ಭಾರತ 59 ಚೈನೀಸ್ ಆ್ಯಪ್‌ಗಳನ್ನು ನಿಷೇಧಿಸಿದೆ. "ರಾಷ್ಟ್ರದ ಹಿತದೃಷ್ಟಿಯಿಂದ ನಾವು ಇದನ್ನು ಮಾಡಬೇಕು (ಐಪಿಎಲ್‌ನಲ್ಲಿ ಚೀನೀ ಪ್ರಾಯೋಜಕರೊಂದಿಗಿನ ಸಂಪರ್ಕ ತಗ್ಗಿಸುವಿಕೆ) ದೇಶ ಮೊದಲು ಹಣ ನಂತರದ ಆದ್ಯತೆಯಾಗಿದೆ, ಹಾಗಾಗಿ ನಾವು ಇದನ್ನು ಮಾದರಿಯನ್ನಾಗಿ ಮಾಡಿಕೊಳ್ಳಬೇಕಿದೆ ಎಂದು ವಾಡಿಯಾ ಪಿಟಿಐಗೆ ತಿಳಿಸಿದರು.

"ಪ್ರಾರಂಭದಲ್ಲಿ ಪ್ರಾಯೋಜಕತ್ವವನ್ನು ಕೊನೆಗೊಳಿಸುವುದು ಕಠಿಣವಾಗಲಿದೆ. ಆದರೆ ಚೀನೀ ಸಂಸ್ಥೆಗಳ ಬದಲಿಗೆ ಅಷ್ಟೇ ಸಂಖ್ಯೆಯ ಭಾರತೀಯ ಕಂಪನಿಗಳ ಪ್ರಾಯೋಜಕರು ನಮಗೆ ಲಭ್ಯವಿದ್ದಾರೆ ಎನ್ನುವುದು ನನಗೆ ಖಾತ್ರಿ ಇದೆ. ರಾಷ್ಟ್ರ ಹಾಗೂ ನಮ್ಮ ಸರ್ಕಾರದ ಬಗ್ಗೆ ನಮಗೆ ಎಲ್ಲ ಗೌರವ ಇರಬೇಕು ಮತ್ತು ಮುಖ್ಯವಾಗಿ ನಮಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಸೈನಿಕರ ಬಗ್ಗೆ ನಾವು ಗಮನಿಸಬೇಕು"

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT