ದೇವದತ್ ಪಡಿಕ್ಕಲ್ ಆಕರ್ಷಕ ಬ್ಯಾಟಿಂಗ್, ಮಿಥುನ್ ಭರ್ಜರಿ ಬೌಲಿಂಗ್ 
ಕ್ರಿಕೆಟ್

ರಣಜಿ ಸೆಮಿಫೈನಲ್ಸ್: ರೋಚಕ ಘಟ್ಟದತ್ತ ಕರ್ನಾಟಕ-ಬಂಗಾಳ ಪಂದ್ಯ

ಕರ್ನಾಟಕ ಹಾಗೂ ಬಂಗಾಳ ನಡುವಿನ ರಣಜಿ ಟೂರ್ನಿಯ ಸೆಮಿಫೈನಲ್ಸ್ ಪಂದ್ಯ ರೋಚಕತೆಯತ್ತ ಮುಖ ಮಾಡಿದೆ.

ಕೋಲ್ಕತಾ: ಕರ್ನಾಟಕ ಹಾಗೂ ಬಂಗಾಳ ನಡುವಿನ ರಣಜಿ ಟೂರ್ನಿಯ ಸೆಮಿಫೈನಲ್ಸ್ ಪಂದ್ಯ ರೋಚಕತೆಯತ್ತ ಮುಖ ಮಾಡಿದೆ.

ಸೋಮವಾರ 4 ವಿಕೆಟ್ ಗೆ 72 ರನ್ ಗಳಿಂದ ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಂಗಾಳ 161 ರನ್ ಗಳಿಗೆ ಆಲೌಟ್ ಆಯಿತು.  ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಸುದೀಪ್ ಚಟರ್ಜಿ 45 ರನ್ ಬಾರಿಸಿದರೆ, ಶ್ರೀವತ್ಸ ಗೋಸ್ವಾಮಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ಏಳನೇ ವಿಕೆಟ್ ಗೆ ಶಹಬಾಜ್ ಅಹ್ಮದ್ ಹಾಗೂ ಅನುಸ್ತುಪ್ ಮುಜುಂದಾರ್ ಅರ್ಧಶತಕ ಜೊತೆಯಾಟವನ್ನು ನೀಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಬಾರಿಸಿದ ಮುಜುಂದಾರ್ 108 ಎಸೆತಗಳಲ್ಲಿ 41 ರನ್ ಬಾರಿಸಿದರು. ಶಹಬಾಜ್ ಅಹ್ಮದ್ 31 ರನ್ ಸಿಡಿಸಿದರು. 
  
ವೇಗದ ಬೌಲರ್ ಅಭಿಮನ್ಯು ಮಿಥುನ್ 4, ಕೆ.ಗೌತಮ್ 3, ರೋನಿತ್ ಮೋರೆ 2 ವಿಕೆಟ್  ಕಬಳಿಸಿದರು.  ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ತಂಡದ ಆರಂಭಿಕ ಆಘಾತಕ್ಕೆ ಒಳಗಾಯಿತು. ಕೆ.ಎಲ್ ರಾಹುಲ್ (0) ರನ್ ಕಲೆ ಹಾಕುವಲ್ಲಿ ವಿಫಲರಾದರು. ಆರ್.ಸಮರ್ಥ್ ಹಾಗೂ ದೇವದತ್ ಪಡಿಕ್ಕಲ್ ಜೋಡಿ ಅರ್ಧಶತಕದ ಜೊತೆಯಾಟವನ್ನು ನೀಡಿತು. ಆರಂಭಿಕ ಆಟಗಾರ ಸಮರ್ಥ್ 2 ಬೌಂಡರಿ ಸಹಾಯದಿಂದ 27 ರನ್ ಸೇರಿಸಿದರು. 
  
ದೇವದತ್ ಪಡಿಕ್ಕಲ್ 109 ಎಸೆತಗಳಲ್ಲಿ 6 ಬೌಂಡರಿ ಸಹಾಯದಿಂದ ಅಜೇಯ 50 ಸಿಡಿಸಿದರು. ಕರುಣ್ ನಾಯರ್ (6) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮನೀಷ್ ಪಾಂಡೆ (ಅಜೇಯ 11) ಹಾಗೂ ದೇವದತ್ ಜೋಡಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದೆ. ಕರ್ನಾಟಕದ ದಿನದಾಟದಂತ್ಯಕ್ಕೆ ಮೂರು ವಿಕೆಟ್ ಗೆ 98 ರನ್ ಕಲೆ ಹಾಕಿದೆ. ಕರ್ನಾಟಕ ಫೈನಲ್ ಪಂದ್ಯಕ್ಕೆ ಪ್ರವೇಶಿಸಲು ಇನ್ನು 254 ರನ್ ಗಳ ಅವಶ್ಯಕತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT