ಐಪಿಎಲ್ ಅಭ್ಯಾಸಕ್ಕಾಗಿ ಚೆನ್ನೈಗೆ ಆಗಮಿಸಿದ ಧೋನಿಗೆ ವೀರೋಚಿತ ಸ್ವಾಗತ 
ಕ್ರಿಕೆಟ್

ವೀಡಿಯೋ: ಐಪಿಎಲ್ ಅಭ್ಯಾಸಕ್ಕಾಗಿ ಚೆನ್ನೈಗೆ ಆಗಮಿಸಿದ ಧೋನಿಗೆ ವೀರೋಚಿತ ಸ್ವಾಗತ

ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ತಯಾರಿ ನಡೆಸಲು ಚೆನ್ನೈಗೆ ಆಗಮಿಸಿದ ಟೀಂ ಇಂಡಿಯಾ ಮಾಜಿ ನಾಯಕ, ಬ್ಯಾಟ್ಸ್‌ಮನ್ ಎಂ.ಎಸ್. ಧೋನಿಗೆ ತಮಿಳುನಾಡಿನ ರಾಜಧಾನಿಯಲ್ಲಿ ವೀರೋಚಿತ ಸ್ವಾಗತ ದೊರಕಿದೆ. 

ಚೆನ್ನೈ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ತಯಾರಿ ನಡೆಸಲು ಚೆನ್ನೈಗೆ ಆಗಮಿಸಿದ ಟೀಂ ಇಂಡಿಯಾ ಮಾಜಿ ನಾಯಕ, ಬ್ಯಾಟ್ಸ್‌ಮನ್ ಎಂ.ಎಸ್. ಧೋನಿಗೆ ತಮಿಳುನಾಡಿನ ರಾಜಧಾನಿಯಲ್ಲಿ ವೀರೋಚಿತ ಸ್ವಾಗತ ದೊರಕಿದೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿರುವ ಧೋನಿಚೆನ್ನೈಗೆ ಆಗಮಿಸಿದ್ದು ಅವರ ಸ್ವಾಗತ ವೀಡಿಯೋವನ್ನು ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.ಅಲ್ಲದೆ "Every goose shall bump with First Day First Show feels! Just #StartTheWhistles! #HomeSweetDen". ಎಂದು ಬರೆದುಕೊಂಡಿದೆ.

ಮಾರ್ಚ್ 3-4 ರಿಂದ ಧೋನಿ ಐಪಿಎಲ್ ಮುಂಬರುವ ಆವೃತ್ತಿಯ ಅಭ್ಯಾಸವನ್ನು ಪ್ರಾರಂಭಿಸಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಕಳೆದ ವಾರ ಖಚಿತಪಡಿಸಿದ್ದರು. ಇನ್ನು ಸಿಎಸ್‌ಕೆ ತರಬೇತಿ ಶಿಬಿರ ಮಾರ್ಚ್ 19 ರ ನಂತರವೇ ಪ್ರಾರಂಭವಾಗಲಿದೆ ಎಂದು ಸಿಇಒ ಹೇಳಿದರು.

ಮಾರ್ಚ್ 29 ರಿಂದ ಈ ಸಾಲಿನ ಐಪಿಎಲ್ ಪ್ರಾರಂಬವಾಗುತ್ತಿದ್ದು ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಮೂವತ್ತೆಂಟು ವರ್ಷದ ಧೋನಿ ಪ್ರಸ್ತುತ ಆಟದಿಂದ ಸ್ವಲ್ಪ ವಿಶ್ರಾಂತಿ ಪಡೆದಿದ್ದು ಅವರು ಕೊನೆಯ ಬಾರಿಗೆ 2019 ರ ವಿಶ್ವಕಪ್‌ನಲ್ಲಿ ಕ್ರಿಕೆಟ್ ಬ್ಯಾಟ್ ಬೀಸಿದ್ದರು ಆದರೆ ನಿಧಾನಗತಿ ಬ್ಯಾಟಿಂಗ್ ಶೈಲಿಯಿಂದ ಅವರು ಟೀಕೆಗೆ ಗುರಿಯಾಗಿದ್ದರು. ವಿಶೇಷವಾಗಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳಲ್ಲಿ (ಸೆಮಿಫೈನಲ್), ಅವರು ನೆಟ್ಟಿಗರ ಆಕ್ರೋಶಕ್ಕೆ ಒಳಗಾಗಿದ್ದರು.

ಈ ವರ್ಷದ ಆರಂಭದಲ್ಲಿ, ಬಿಸಿಸಿಐನ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಧೋನಿ ಸ್ಥಾನ ಪಡೆದಿರಲಿಲ್ಲ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?