ಪ್ರಧಾನಿ ಮೋದಿ ಹಾಗೂ ಆಸಿಸ್ ಪ್ರಧಾನಿ ಸ್ಕಾಟ್ ಮೊರಿಸ್ 
ಕ್ರಿಕೆಟ್

ಮಹಿಳಾ ಟಿ20 ವಿಶ್ವಕಪ್ ವಿಶ್ವಕಪ್ ಫೈನಲ್: ಇಂಡೋ-ಆಸಿಸ್ ಆಟಗಾರ್ತಿಯರಿಗೆ ಪ್ರಧಾನಿ ಮೋದಿ, ಆಸಿಸ್ ಪ್ರಧಾನಿ ಸ್ಕಾಟ್ ಮೊರಿಸನ್ ಶುಭ ಹಾರೈಕೆ

ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಆಸ್ಚ್ರೇಲಿಯಾ ಮಹಿಳಾ ತಂಡಗಳು ಟಿ20 ವಿಶ್ವಕಪ್ ವಿಶ್ವಕಪ್ ಫೈನಲ್ ಪಂದ್ಯ ಆಡುತ್ತಿದ್ದು, ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸಿಸ್ ಪ್ರಧಾನಿ ಸ್ಟಾಟ್ ಮೊರಿಸನ್ ಉಭಯ ತಂಡಗಳಿಗೆ ಶುಭಕೋರಿದ್ದಾರೆ.

ನವದೆಹಲಿ: ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಆಸ್ಚ್ರೇಲಿಯಾ ಮಹಿಳಾ ತಂಡಗಳು ಟಿ20 ವಿಶ್ವಕಪ್ ವಿಶ್ವಕಪ್ ಫೈನಲ್ ಪಂದ್ಯ ಆಡುತ್ತಿದ್ದು, ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸಿಸ್ ಪ್ರಧಾನಿ ಸ್ಟಾಟ್ ಮೊರಿಸನ್ ಉಭಯ ತಂಡಗಳಿಗೆ ಶುಭಕೋರಿದ್ದಾರೆ.

ಚೊಚ್ಚಲ ವಿಶ್ವಕಪ್ ಪ್ರಶಸ್ತಿ ಎದುರು ನೋಡುತ್ತಿರುವ ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಮಾಜಿ ನಾಯಕಿ ಮಿಥಾಲಿ ರಾಜ್ ಸೇರಿದಂತೆ ಪ್ರಮುಖರು ಶುಭಾಶಯ ಕೋರಿದ್ದು, ಅತ್ತ
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮೊರಿಸನ್ ಟ್ವಿಟರ್ ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಫೈನಲ್ ಪಂದ್ಯದ ಕುರಿತು ಶುಭ ಕೋರಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೊರಿಸನ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಬಿಗ್ ಫೈನಲ್ ಬಗ್ಗೆ ಉಲ್ಲೇಖಿಸಿದ್ದಾರೆ. ಕ್ರಿಕೆಟ್ ಲೋಕದ 2 ದೊಡ್ಡ ಶ್ರೇಷ್ಠ ತಂಡಗಳು ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿದ್ದು, ಇಂದು ರಾತ್ರಿ ಅತೀ ದೊಡ್ಡ ಮತ್ತು ಕುತೂಹಲಕಾರಿ ಪಂದ್ಯಕ್ಕೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಆಸಿಸ್ ತಂಡವೇ ಪಂದ್ಯ ಗೆಲ್ಲಲಿದೆ ಎಂದು ಭಾರತ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಭಾರತ ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯಕ್ಕಿಂತ ಮತ್ತೊಂದು ದೊಡ್ಡ ಪಂದ್ಯವಿಲ್ಲ. ಉಭಯ ತಂಡದ ಆಟಗಾರ್ತಿಯರಿಗೂ ಮಹಿಳಾ ದಿನಾಚರಣೆ ನಿಮಿತ್ತ ನನ್ನ ಶುಭಕಾಮನೆಗಳು. ಅತ್ಯುತ್ತಮ ತಂಡವೇ ನಾಳೆ ಗೆಲುವು ಸಾಧಿಸಲಿದ್ದು, ಎಂಸಿಜಿ ಕೂಡ ಭಾರತೀಯ ಪ್ರೇಕ್ಷಕರಿಂದ ಬ್ಲೂ ಮೌಂಟೇನ್ ಆಗಿರಲಿದೆ. ಹಾಗೆಯೇ ನೀಲಿ ಸಾಗರವೇ ಹರಿದು ಬರಲಿದೆ ಎಂದು ಆಸಿಸ್ ಪ್ರಧಾನಿಯ ಕಾಲೆಳೆದಿದ್ದಾರೆ.

ಇತ್ತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಗೆಲುವಿಗಾಗಿ ಶುಭ ಹಾರೈಸಿದ್ದು, ಹಾಗೆಯೇ ಮಹಿಳೆಯರ ಸಾಧನೆಯಿಂದ ಇಡೀ ದೇಶವೇ ಹೆಮ್ಮೆಪಟ್ಟುಕೊಳ್ಳುವಂತಾಗಿದೆ ಎಂದಿದ್ದಾರೆ. ಅಂತೆಯೇ ಭಾರತ ಮಹಿಳಾ ಕ್ರಿಕೆಟ್ ಮಾಜಿ ನಾಯಕಿ ಮಿಥಾಲಿ ರಾಜ್ ಕೂಡ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ವಿಶೇಷ ವಿಡಿಯೋ ಅಪ್ಲೋಡ್ ಮಾಡಿ ಭಾರತೀಯ ವನಿತೆಯರಿಗೆ ಶುಭಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ