ಧರ್ಮಶಾಲಾ ಕ್ರಿಕೆಟ್ ಸ್ಟೇಡಿಯಂ 
ಕ್ರಿಕೆಟ್

ಧರ್ಮಶಾಲಾ: ಮಳೆಯಲ್ಲಿ ಕೊಚ್ಚಿ ಹೋದ  ದಕ್ಷಿಣ ಆಫ್ರಿಕಾ- ಭಾರತ ಮೊದಲ ಏಕದಿನ ಪಂದ್ಯ 

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಏಕದಿನ ಪಂದ್ಯ ತೀವ್ರ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವೂ ಮಳೆಯಿಂದಾಗಿ ರದ್ದುಗೊಂಡಿತ್ತು.

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಏಕದಿನ ಪಂದ್ಯ ತೀವ್ರ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವೂ ಮಳೆಯಿಂದಾಗಿ ರದ್ದುಗೊಂಡಿತ್ತು.

ಈ ಭಾಗದಲ್ಲಿ ಗುರುವಾರ ಮತ್ತು ಶುಕ್ರವಾರ ವ್ಯಾಪಕ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ನಂತರ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದ ಬಗ್ಗೆ ಅನುಮಾನ ಉಂಟಾಗಿತ್ತು. ಆಯೋಜಕರು ಹಾಗೂ ಅಭಿಮಾನಿಗಳು ಮಳೆ ಬಾರದಂತೆ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಕೂಡಾ ಸಲ್ಲಿಸಿದ್ದರು. 

ಬುಧವಾರ ಉಭಯ ತಂಡಗಳು ತಾಲೀಮು ನಡೆಸುವ ವೇಳೆ ಕೂಡಾ ಬಾರಿ ಮಳೆ ಬಿದ್ದಿದ್ದರಿಂದ ಆಟದ ಮೈದಾನವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ನಿನ್ನೆ ರಾತ್ರಿಯಿಂದಲೂ  ಮಳೆಯಾದ್ದರಿಂದ ಟಾಸ್ ಕೂಡಾ ವಿಳಂಬವಾಯಿತು. ಮೈದಾನದಲ್ಲಿ ಬಿದ್ದ ನೀರನ್ನು ತೆರವುಗೊಳಿಸುವಲ್ಲಿ ಸಿಬ್ಬಂದಿ ವಿಫಲವಾದ್ದರಿಂದ ಮೈದಾನದಲ್ಲಿದ್ದ ಆಂಫೈರ್ ಗಳು ಪಂದ್ಯವನ್ನು ರದ್ದುಪಡಿಸಿದರು. 

ಕೊರೋನಾ ವೈರಸ್ ಭೀತಿ, ಹವಾಮಾನ ವೈಫರೀತ್ಯದ  ನಡುವೆಯೂ ಭರ್ಜರಿಯಾಗಿ ಟಿಕೆಟ್ ಗಳು ಬಿಕರಿಯಾಗಿದ್ದವು.  ಆದರೆ, ಪಂದ್ಯ ನಡೆಯದೆ ಅಭಿಮಾನಿಗಳು ಭಾರಿ ನಿರಾಸೆ ಅನುಭವಿಸಿದರು.

ಮಾರ್ಚ್ 15 ರಂದು ಲಖನೌನಲ್ಲಿ ಏರಡನೇ ಹಾಗೂ ಮಾರ್ಚ್ 18 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಅಂತಿಮ ಪಂದ್ಯ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT