ಕೇನ್ ರಿಚರ್ಡ್ ಸನ್ 
ಕ್ರಿಕೆಟ್

ಆಸೀಸ್ ವೇಗಿ ಕೇನ್ ರಿಚರ್ಡ್ ಸನ್ ಗೆ ಕೊರೋನಾ ವೈರಸ್ ಸೋಂಕು ಭೀತಿ! 

ಇಡೀ ವಿಶ್ವವೇ ಪ್ರಸ್ತುತ ಕೊರೊನಾ ವೈರಸ್‌ ಭೀತಿಯಲ್ಲಿ ಮುಳುಗಿದೆ. ಈ ಮಹಾಮಾರಿ ವೈರಸ್‌ ಜಾಗತಿಕ ಕ್ರೀಡಾಚಟುವಟಿಕೆಗಳ ಮೇಲೆ ಗಂಭೀರ ಪ್ರಭಾವ ಬೀರಿದೆ

ಸಿಡ್ನಿ: ಇಡೀ ವಿಶ್ವವೇ ಪ್ರಸ್ತುತ ಕೊರೊನಾ ವೈರಸ್‌ ಭೀತಿಯಲ್ಲಿ ಮುಳುಗಿದೆ. ಈ ಮಹಾಮಾರಿ ವೈರಸ್‌ ಜಾಗತಿಕ ಕ್ರೀಡಾಚಟುವಟಿಕೆಗಳ ಮೇಲೆ ಗಂಭೀರ ಪ್ರಭಾವ ಬೀರಿದೆ

ಮಾರ್ಚ್‌ 29 ರಿಂದ ಆರಂಭವಾಗುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ರಾಯಲ್‌ ಚಾಂಲೆಂಜರ್ಸ್ ಬೆಂಗಳೂರು ಪರ ಆಡಬೇಕಿರುವ ಆಸ್ಟ್ರೇಲಿಯಾದ ಕೇನ್ ರಿಚರ್ಡ್‌ಸನ್‌ಗೆ ಕೊರೊನಾ ವೈರಸ್‌ ಸೋಂಕು ತಗುಲಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

ಇದರ ಪರಿಣಾಮ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಿಂದ ಕೇನ್ ರಿಚರ್ಡ್ಸನ್ ಹೊರಗುಳಿದಿದ್ದಾರೆ. ಕೇನ್ ರಿಚರ್ಡ್ಸನ್‌ಗೆ ಗಂಟಲು ನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಂದ್ಯದಿಂದ ಹೊರ ನಡೆದಿದ್ದಾರೆ.

ಕೇನ್ ರಿಚರ್ಡ್‌ಸನ್‌ ಆಸ್ಟ್ರೇಲಿಯಾ ಏಕದಿನ ತಂಡದೊಂದಿಗೆ ದಕ್ಷಿಣ ಆಫ್ರಿಕಾದಿಂದ ಇತ್ತೀಚಿಗಷ್ಟೇ ಮರಳಿದ್ದರು. ಅಲ್ಲದೆ ಗಂಟಲು ನೋವಿನ ಬಗ್ಗೆ ವೈದ್ಯಕೀಯ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಇದರಂತೆ ಕೋವಿಡ್ 19 ಸೋಂಕು ತಗುಲಿದೆಯೇ ಎಂಬುದನ್ನು ಪರೀಕ್ಷೆ ಮಾಡಲಾಗುತ್ತಿದೆ

29ರ ಹರೆಯದ ಕೇನ್ ರಿಚರ್ಡ್‌ಸನ್ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೊರೊನಾ ವೈರಸ್ ಸೋಂಕು ತಗುಲಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಇದರಿಂದಾಗಿ ಮೊದಲ ಏಕದಿನ ಪಂದ್ಯದಲ್ಲಿ ಆಡದಂತೆ ಸೂಚಿಸಲಾಗಿದೆ

"ನಮ್ಮ ವೈದ್ಯಕೀಯ ಸಿಬ್ಬಂದಿಯು ಇದನ್ನು ಗಂಟಲಿನ ಸೋಂಕು ಆಗಿ ಪರಿಗಣಿಸುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾ ಸರಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹಾಗಾಗಿ ಕೇನ್ ರಿಚರ್ಡ್ಸನ್ ಅವರನ್ನು ತಂಡದ ಇತರೆ ಸದಸ್ಯರಿಂದ ದೂರವಿಸಲಾಗಿದೆ. ಕಳೆದ 14 ದಿನಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಹಿಂತಿರುಗಿರುವ ಹಿನ್ನೆಲೆಯಲ್ಲಿ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಸೂಕ್ತ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ" ಎಂದು ಕ್ರಿಕೆಟ್ ಆಸ್ಟ್ರೇಲಿಯಾ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT