ಶೊಯೇಬ್ ಅಖ್ತರ್ 
ಕ್ರಿಕೆಟ್

ಯಾರಾದರೂ 'ಬಾವಲಿ, ನಾಯಿಗಳನ್ನು ತಿನ್ನುತ್ತಾರಾ': ಚೀನಾ ವಿರುದ್ಧ ಶೊಯೇಬ್‌ ಅಖ್ತರ್ ಆಕ್ರೋಶ

ಮಹಾಮಾರಿ ಕೊರೋನಾ ವೈರಸ್ ಜಗತ್ತಿನಾದ್ಯಂತ 5,400ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು, ಇದಕ್ಕೆ ಚೀನಾವೇ ಕಾರಣ ಎಂದು ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಹೋರ್: ಮಹಾಮಾರಿ ಕೊರೋನಾ ವೈರಸ್ ಜಗತ್ತಿನಾದ್ಯಂತ 5,400ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು, ಇದಕ್ಕೆ ಚೀನಾವೇ ಕಾರಣ ಎಂದು ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗತ್ತಿನಾದ್ಯಂತ ಹರಡುತ್ತಿರುವ ಕೊರೋನಾ ವೈರಸ್ ಗೆ ಚೀನಾವೇ ಕಾರಣ ಎಂದಿರುವ ಅಖ್ತರ್, "ಬಾವಲಿಗಳನ್ನು ತಿಂದು ಅದರ ರಕ್ತ ಮತ್ತು ಮೂತ್ರವನ್ನು ಕುಡಿದು ವೈರಸ್‌ಗಳನ್ನು ಯಾಕೆ ಹರಡುತ್ತೀರಿ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಾನು ಇಲ್ಲಿ ಮಾತನಾಡುತ್ತಿರುವುದು ಚೀನಾದವರ ಬಗ್ಗೆ. ಇಡೀ ಜಗತ್ತನ್ನೇ ಅವರು ಅಪಾಯಕ್ಕೆ ನೂಕಿದ್ದಾರೆ. ನೀವು ಬಾವಲಿಗಳು, ನಾಯಿಗಳು ಮತ್ತು ಬೆಕ್ಕುಗಳನ್ನು ಯಾಕೆ ತಿನ್ನುತ್ತೀರಿ ಎಂಬುದೇ ಅರ್ಥವಾಗುತ್ತಿಲ್ಲ. ನನಗೆ ಇನ್ನಿಲ್ಲದ ಕೋಪ ಬರುತ್ತಿದೆ," ಎಂದು ತಮ್ಮ ಯೂಟ್ಯೂಬ್‌ ಚಾನಲ್‌ ಮೂಲಕ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

"ಇಡೀ ವಿಶ್ವವೇ ಈಗ ಅಪಾಯದಲ್ಲಿದೆ. ಪ್ರವಾಸೋದ್ಯಮಕ್ಕೆ ಭಾರಿ ನಷ್ಟವಾಗುತ್ತಿದೆ. ಆರ್ಥಿಕತೆಗೂ ಭಾರಿ ಹೊಡೆತ ಬಿದ್ದಿದೆ. ಪ್ರಪಂಚವೇ ಸ್ಥಬ್ಧವಾಗುವ ಸ್ಥಿತಿ ನಿರ್ಮಾಣವಾಗಿದೆ," ಎಂದು ಅಖ್ತರ್ ಚೀನಾ ವಿರುದ್ಧ ಗುಡುಗಿದ್ದಾರೆ.

"ಚೀನಾದ ಜನತೆ ವಿರುದ್ಧ ನನ್ನದೇನೂ ತಕರಾರಿಲ್ಲ. ಆದರೆ ಅವರು ಪ್ರಾಣಿಗಳೊಂದಿಗೆ ನಡೆದುಕೊಳ್ಳುವ ರೀತಿ ಸರಿಯಲ್ಲ. ಇದು ನಿಮ್ಮ ಸಂಪ್ರದಾಯ ಇರಬಹುದು. ಆದರೆ ಇದರಿಂದ ನಿಮಗೂ ಏನೂ ಪ್ರಯೋಜನವಾಗುವುದಿಲ್ಲ. ಮನುಷ್ಯತ್ವವನ್ನೇ ಇದು ಕೊಲ್ಲುತ್ತಿದೆ. ಚೀನಾದ ಜನರನ್ನು ಬಹಿಷ್ಕರಿಸಿ ಎಂದು ನಾನು ಹೇಳುತ್ತಿಲ್ಲ. ಆದರೆ ಕೆಲ ನೀತಿ ನಿಯಮ ಇರಬೇಕು. ಏನೆಂದರೆ ಏನನ್ನೂ ತಿನ್ನುವುದು ಸರಿಯಲ್ಲ," ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT