ಮೊಹಮ್ಮದ್ ಶಮಿ 
ಕ್ರಿಕೆಟ್

ವೈಯಕ್ತಿಕ ಸಮಸ್ಯೆಗಳಿಂದ ಮೂರು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ: ಮೊಹಮ್ಮದ್ ಶಮಿ

ಹಲವು ವೈಯಕ್ತಿಕ ಸಮಸ್ಯೆಗಳಿಂದ ಮೂರು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ ಎಂದು ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬಹಿರಂಗಪಡಿಸಿದ್ದಾರೆ.

ನವದೆಹಲಿ: ಹಲವು ವೈಯಕ್ತಿಕ ಸಮಸ್ಯೆಗಳಿಂದ ಮೂರು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ ಎಂದು ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬಹಿರಂಗಪಡಿಸಿದ್ದಾರೆ.

ಭಾರತ ತಂಡದ ಉಪ ನಾಯಕ ರೋಹಿತ್ ಶರ್ಮ ಅವರೊಂದಿಗೆ ನಡೆಸಿದ ಇನ್ಸ್ಟಾಗ್ರಾಂ ಲೈವ್ ಚಾಟ್ ನಲ್ಲಿ ಈ ಬಗ್ಗೆ ಮಾತನಾಡಿದ ಮೊಹಮ್ಮದ್ ಶಮಿ, 2015ರ ವಿಶ್ವಕಪ್ ನಂತರ ವೈಯಕ್ತಿಕ ಮತ್ತು ವೃತ್ತಿ ಜೀವನ ಸಮಸ್ಯೆಯಿಂದಾಗಿ ಬದುಕುವುದೇ ಬೇಡ ಎಂದು ಅನಿಸುತ್ತಿತ್ತು, ಖಿನ್ನತೆ, ಒತ್ತಡದಿಂದ ಬಳಲುತ್ತಿದ್ದೆ ಎಂದಿದ್ದಾರೆ.

2015ರ ವಿಶ್ವಕಪ್ ವೇಳೆ ನನಗೆ ಗಾಯವಾಯಿತು. ನಂತರ ಭಾರತ ತಂಡಕ್ಕೆ ವಾಪಸ್ ಮರಳಲು 18 ತಿಂಗಳು ಬೇಕಾಯಿತು. ಆ ಸಮಯ ನನ್ನ ವೃತ್ತಿಜೀವನದ ಬಹಳ ನೋವಿನ ಸಮಯವಾಗಿತ್ತು. ನಂತರ ಕೌಟುಂಬಿಕ ಸಮಸ್ಯೆ ಎದುರಾಯಿತು. ಅದು ನಡೆಯುತ್ತಿರುವಾಗ ಐಪಿಎಲ್ ಗೆ 10-12 ದಿನ ಮೊದಲು ಅಪಘಾತವಾಯಿತು. ಈ ಸಮಯದಲ್ಲಿ ಮಾಧ್ಯಮಗಳಲ್ಲಿ ನನ್ನ ಬಗ್ಗೆ ಹಲವು ಕಥೆಗಳು, ಅಂತೆಕಂತೆಗಳು ಬರುತ್ತಿದ್ದವು.

ಈ ಸಮಯದಲ್ಲಿ ನನ್ನ ಕುಟುಂಬ ಸದಸ್ಯರು ಮತ್ತು ಕೆಲವು ಸ್ನೇಹಿತರು ಬೆಂಬಲಕ್ಕೆ ನಿಂತರು. ಅವರ ಬೆಂಬಲ, ಧೈರ್ಯದ ನುಡಿಗಳಿಂದಾಗಿಯೇ ಎಲ್ಲಾ ಸಮಸ್ಯೆಗಳನ್ನು ಎದುರಿಸಿ ಇಂದು ಗೆಲ್ಲಲು ಸಾಧ್ಯವಾಗಿದೆ. ನನ್ನ ಕುಟುಂಬದವರು ಮತ್ತು ಸ್ನೇಹಿತರ ಪ್ರೋತ್ಸಾಹ ಸಿಕ್ಕದೇ ಇರುತ್ತಿದ್ದರೆ ಕ್ರಿಕೆಟ್ ಗೆ ಮತ್ತೆ ಮರಳಲು ಸಾಧ್ಯವಾಗುತ್ತಿರಲಿಲ್ಲ. ಆ ಸಮಯದಲ್ಲಿ ಮೂರು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡಿದ್ದೆ. ನನ್ನ ವರ್ತನೆ, ದಿನನಿತ್ಯದ ಬದುಕು ಕಂಡು ಮನೆಯಲ್ಲಿ ಒಬ್ಬರು ಯಾವಾಗಲೂ ನನ್ನ ಮೇಲೆ ಕಣ್ಣಿಟ್ಟಿರುತ್ತಿದ್ದರು. ಅಪಾರ್ಟ್ ಮೆಂಟಿನ 24ನೇ ಮಹಡಿಯಲ್ಲಿ ಇದ್ದ ನಮ್ಮ ಮನೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂದು ಮನೆಯವರು ಭಯಪಡುತ್ತಿದ್ದರು ಎಂದು ಮೊಹಮ್ಮದ್ ಶಮಿ ಹೇಳಿಕೊಂಡಿದ್ದಾರೆ.

ಕುಟುಂಬಕ್ಕಿಂತ ದೊಡ್ಡ ಶಕ್ತಿ ಬೇರೊಂದಿಲ್ಲ ಎಂದು ನನಗೆ ಗೊತ್ತಾಗಿದ್ದೇ ಆಗ. ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ, ನಿನ್ನ ಆಟದತ್ತ ಗಮನಹರಿಸು ಎಂದು ಮನೆಯಲ್ಲಿ ಯಾವಾಗಲೂ ಹೇಳುತ್ತಿದ್ದರು.ಮನಸ್ಸಿನಲ್ಲಿರುವ ದುಗುಡ, ಚಿಂತೆ ಎಲ್ಲವನ್ನೂ ಬದಿಗೊತ್ತಿ ಕೇವಲ ಮೈದಾನದಲ್ಲಿ ನೆಟ್ ಮೇಲೆ ಗಮನಹರಿಸುತ್ತಿದ್ದೆ. ಓಡುತ್ತಿದ್ದೆ. ಆಗ ಏನೆಲ್ಲಾ ಮಾಡುತ್ತಿದ್ದೆ ಎಂದು ನನಗೇ ಗೊತ್ತಿಲ್ಲ, ಅಷ್ಟು ಒತ್ತಡದಲ್ಲಿದ್ದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT