ಸಚಿನ್, ವಿರಾಟ್ ಕೊಹ್ಲಿ 
ಕ್ರಿಕೆಟ್

ಸಚಿನ್ ಮತ್ತು ವಿರಾಟ್‌ ನಡುವಣ ವ್ಯತ್ಯಾಸವನ್ನು ವಿವರಿಸಿದ‌ ಸುರೇಶ್‌ ರೈನಾ

ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ಅವರ ಬಹುತೇಕ ದಾಖಲೆಗಳನ್ನು ಮುರಿದಿರುವ ಭಾರತ ತಂಡದ ಹಾಲಿ ನಾಯಕ ವಿರಾಟ್‌ ಕೊಹ್ಲಿ, ತೆಂಡೂಲ್ಕರ್ ಹೆಸರಲ್ಲಿರುವ 100 ಅಂತಾರಾಷ್ಟ್ರೀಯ ಶತಕಗಳ ದಾಖಲೆಯನ್ನು ಮುರಿಯಬಲ್ಲ ಸಾಮರ್ಥ್ಯ ಹೊಂದಿದ್ದಾರೆ

ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ಅವರ ಬಹುತೇಕ ದಾಖಲೆಗಳನ್ನು ಮುರಿದಿರುವ ಭಾರತ ತಂಡದ ಹಾಲಿ ನಾಯಕ ವಿರಾಟ್‌ ಕೊಹ್ಲಿ, ತೆಂಡೂಲ್ಕರ್ ಹೆಸರಲ್ಲಿರುವ 100 ಅಂತಾರಾಷ್ಟ್ರೀಯ ಶತಕಗಳ ದಾಖಲೆಯನ್ನು ಮುರಿಯಬಲ್ಲ ಸಾಮರ್ಥ್ಯ ಹೊಂದಿದ್ದಾರೆ

ಅಂದಹಾಗೆ 2011ರಲ್ಲಿ ಭಾರತ ತಂಡ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಭಾರತ ತಂಡದ ಪರ ಸಚಿನ್‌ ಮತ್ತು ಕೊಹ್ಲಿ ಜೊತೆಯಾಗಿ ಆಡಿದ್ದರು. ಅದೇ ತಂಡದ ಭಾಗವಾಗಿದ್ದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಸುರೇಶ್‌ ರೈನಾ, ಇದೀಗ ಸಚಿನ್‌ ಮತ್ತು ವಿರಾಟ್‌ ನಡುವಣ ವ್ಯತ್ಯಾಸದ ಬಗ್ಗೆ ಮಾತನಾಡಿದ್ದಾರೆ

ಖಲೀಜ್‌ ಟೈಮ್ಸ್‌ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿರುವ ರೈನಾ, ಇಬ್ಬರು ದಿಗ್ಗಜ ಆಟಗಾರರ ಜೊತೆಗೆ ಏಕಕಾಲದಲ್ಲಿ ಆಡಿದ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಒಂದು ಪಂದ್ಯವನ್ನು ಎದುರಾಗುವಾಗ ಕೊಹ್ಲಿ-ಸಚಿನ್ ಹೇಗೆ ವಿಭಿನ್ನ ಆಲೋಚನೆ ಹೊಂದಿರುತ್ತಿದ್ದರು ಎಂಬುದನ್ನು ವಿವರಿಸಿದ್ದಾರೆ

"ಸಚಿನ್‌ ಮತ್ತು ವಿರಾಟ್‌ ಇಬ್ಬರೂ ಹಲವು ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ. ವಿರಾಟ್‌ ಆಡುವ ಪ್ರತಿ ಪಂದ್ಯವನ್ನು ಗೆಲ್ಲಲು ನೋಡುತ್ತಾರೆ. ಆದರೆ, ಸಚಿನ್‌ ಪ್ರತಿ ಪಂದ್ಯದಲ್ಲೂ ತಾಳ್ಮೆಯಿಂದ ಇರಲು ಪ್ರಯತ್ನ ಮಾಡುತ್ತಾರೆ. ಸಚಿನ್‌ ಬಳಿ ಸದಾ ತಾಳ್ಮೆ ಇರುತ್ತದೆ. ಅವರ ತಾಳ್ಮೆಯಿಂದಲೇ ನಾವು 2011ರ ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿದ್ದು. ತಂಡದ ಪ್ರತಿಯೊಬ್ಬ ಆಟಗಾರನ ಮನದಲ್ಲೂ ನಾವು ಈ ವಿಶ್ವಕಪ್‌ ಗೆಲ್ಲಬಹುದು ಎಂಬ ಆತ್ಮವಿಶ್ವಾಸ ಮೂಡಿಸಿದ್ದರು. ತಂಡದಲ್ಲಿ ಅವರು ಎರಡನೇ ಕೋಚ್‌ ರೀತಿಯಲ್ಲಿ ಇದ್ದರು," ಎಂದು ರೈನಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT