ಸಚಿನ್ ದ್ವಿಶತಕ 
ಕ್ರಿಕೆಟ್

ಸಚಿನ್ ತೆಂಡೂಲ್ಕರ್ 190 ರನ್ ಗೆ ಔಟ್ ಆಗಿದ್ದರು.. ಆದರೆ ಅಂಪೈರ್ ಪ್ರೇಕ್ಷಕರರಿಗೆ ಹೆದರಿ ಔಟ್ ಕೊಡಲಿಲ್ಲ; ಡೇಲ್ ಸ್ಟೇಯ್ನ್

ಭಾರತದ ಸಚಿನ್ ತೆಂಡೂಲ್ಕರ್ ಮೊಟ್ಟ ಮೊದಲ ದ್ವಿಶತಕ ಸಿಡಿಸಿದ್ದ ಪಂದ್ಯದಲ್ಲಿ ಅವರು 190 ರನ್ ಗಳಿಗೆ ಔಟ್ ಆಗಿದ್ದರು. ಆದರೆ ಅಂಪೈರ್ ಪ್ರೇಕ್ಷಕರ ಕೂಗಾಟಕ್ಕೆ ಹೆದರಿ ಔಟ್ ಕೊಡಲಿಲ್ಲ ಎಂದು ದಕ್ಷಿಣ ಆಫ್ರಿಕಾ ತಂಡದ ವೇಗಿ ಡೇಲ್ ಸ್ಟೇಯ್ನ್ ಹೇಳಿದ್ದಾರೆ.

ನವದೆಹಲಿ: ಭಾರತದ ಸಚಿನ್ ತೆಂಡೂಲ್ಕರ್ ಮೊಟ್ಟ ಮೊದಲ ದ್ವಿಶತಕ ಸಿಡಿಸಿದ್ದ ಪಂದ್ಯದಲ್ಲಿ ಅವರು 190 ರನ್ ಗಳಿಗೆ ಔಟ್ ಆಗಿದ್ದರು. ಆದರೆ ಅಂಪೈರ್ ಪ್ರೇಕ್ಷಕರ ಕೂಗಾಟಕ್ಕೆ ಹೆದರಿ ಔಟ್ ಕೊಡಲಿಲ್ಲ ಎಂದು ದಕ್ಷಿಣ ಆಫ್ರಿಕಾ ತಂಡದ ವೇಗಿ ಡೇಲ್ ಸ್ಟೇಯ್ನ್ ಹೇಳಿದ್ದಾರೆ.

ಸ್ಕೈ ಸ್ಪೋರ್ಟ್ಸ್ ಕ್ರಿಕೆಟ್ ಕಾರ್ಯಕ್ರಮದಲ್ಲಿ ಜೇಮ್ಸ್ ಆಂಡರ್ಸನ್ ಅವರೊಂದಿಗೆ ಮಾತನಾಡಿದ ಸ್ಟೇಯ್ನ್, '2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸಚಿನ್ ತೆಂಡೂಲ್ಕರ್ ತಮ್ಮ ಚೊಚ್ಚಲ ಏಕದಿನ ದ್ವಿಶತಕ ಬಾರಿಸಿದರು.  ಆದರೆ ಅವರು 190 ರನ್ ಗಳಿಸಿದ ಸಂದರ್ಭದಲ್ಲಿ ಔಟ್ ಆಗಿದ್ದರೂ  ಅಂಪೈರ್ ಔಟ್ ಕೊಡಲಿಲ್ಲ ಎಂದು ಹೇಳಿದ್ದಾರೆ.

2010ರ ಭಾರತದ ಪ್ರವಾಸದ ವೇಳೆ ಗ್ವಾಲಿಯರ್ ನಲ್ಲಿ ನಡೆದ ಪಂದ್ಯ ನನಗೆ ಇನ್ನೂ ನೆನಪಿದೆ. ಆ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮೊಟ್ಟ ಮೊದಲ ಏಕದಿನ ದ್ವಿಶತಕ ಗಳಿಸಿದ್ದರು. ಆದರೆ ಆ ಪಂದ್ಯದಲ್ಲಿ 190 ರನ್ ಗಳಿಸಿ ಸಚಿನ್ ಔಟ್ ಆಗಿದ್ದರು. ನಾನು ಎಸೆದ ಎಲ್ ಬಿ ಬಲೆಗೆ ಸಚಿನ್  ಬಿದಿದ್ದರು. ಈ ವಿಚಾರ ಅಂಪೈರ್ ಇಯಾನ್ ಗೌಲ್ಡ್ ಗೂ ಕೂಡ ಗೊತ್ತಿತ್ತು. ಆದರೆ ಪ್ರೇಕ್ಷಕರ ಕೂಗಾಟ ಮತ್ತು ಚೀರಾಟಕ್ಕೆ ಹೆದರಿ ಅವರು ನಾಟೌಟ್ ನೀಡಿದ್ದರು. ಪಂದ್ಯದ ಬಳಿಕ ನಾನು ನೇರವಾಗಿ ಅಂಪೈರ್ ಗೌಲ್ಡ್ ಬಳಿ ಹೋಗಿ, 'ನೀವು ಯಾಕೆ ಔಟ್ ಕೊಡಲಿಲ್ಲ ಎಂದು ಕೇಳಿದಾಗ, ಅದಕ್ಕೆ  ಅವರು ಸುತ್ತಲೂ ನೋಡಿ ನಾನು ಔಟ್ ಕೊಟ್ಟರೆ ನಾನು ಹೋಟೆಲ್‌ಗೆ ಹಿಂತಿರುಗುವುದಿಲ್ಲ' ಎಂದು ಹೇಳಿದರು ಎಂದು ಸ್ಟೇಯ್ನ್ ಆ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ. 

ಫೆಬ್ರವರಿ 24 ರಂದು ಗ್ವಾಲಿಯರ್‌ನಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಸಚಿನ್ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ದ್ವಿಶತಕ ಗಳಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT