ಗ್ರೇಮ್ ಸ್ಮಿತ್ ಸೌರವ್ ಗಂಗೂಲಿ 
ಕ್ರಿಕೆಟ್

ಸೌರವ್ ಗಂಗೂಲಿಯನ್ನು ಐಸಿಸಿಯ ಮುಂದಿನ ಅಧ್ಯಕ್ಷರಾಗಿ ಕಾಣುವ ಆಸೆ ಇದೆ: ಗ್ರೇಮ್ ಸ್ಮಿತ್

ದಕ್ಷಿಣ ಆಫ್ರಿಕಾದ ಕ್ರಿಕೆಟ್ ತಾರೆ ಗ್ರೇಮ್ ಸ್ಮಿತ್ ಬಿಸಿಸಿಐ ಅಧ್ಯಕ್ಷರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಗಂಗೂಲಿ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ಅಧ್ಯಕ್ಷರನ್ನಾಗಿ ಕಾಣಬೇಕೆಂದು ಬಯಸಿದ್ದಾರೆ. 

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಕ್ರಿಕೆಟ್ ತಾರೆ ಗ್ರೇಮ್ ಸ್ಮಿತ್ ಬಿಸಿಸಿಐ ಅಧ್ಯಕ್ಷರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಗಂಗೂಲಿ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ಅಧ್ಯಕ್ಷರನ್ನಾಗಿ ಕಾಣಬೇಕೆಂದು ಬಯಸಿದ್ದಾರೆ.

ಕೊರೋನಾ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಆಟವನ್ನು ಮುನ್ನಡೆಸಲುಪ್ರಸ್ತುತ ಭಾರತೀಯ ಮಂಡಳಿಯ ಅಧ್ಯಕ್ಷ ಗಂಗೂಲಿ ಸೂಕ್ತ ವ್ಯಕ್ತಿ ಎಂದು ತಾನು ನಂಬಿದ್ದೇನೆ ಎಂದು ಸ್ಮಿತ್ ಹೇಳಿದ್ದಾರೆ. "ಐಸಿಸಿಯ ಮುಖ್ಯಸ್ಥರಾಗಿ ಸರಿಯಾದ ವ್ಯಕ್ತಿಯನ್ನು ಹೊಂದಿರುವುದು ಬಹಳ ಮುಖ್ಯ. ಕೋವಿಡ್ ನಂತರದ, ಕ್ರಿಕೆಟ್‌ಗೆ ಬಲವಾದ ನಾಯಕತ್ವದ ಅಗತ್ಯವಿರುತ್ತದೆ ಮತ್ತು ನಾಯಕತ್ವದ ರುಜುವಾತಿನೊಂದಿಗೆ  ಈ ಸ್ಥಾನಕ್ಕೆ ಬರಲು ಇದು ಸಮಯವಾಗಿದೆ" ಎಂದು ಸ್ಮಿತ್ ಹೇಳಿದರು.

ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರು ಕಳೆದ ಡಿಸೆಂಬರ್‌ನಲ್ಲಿ ತಮ್ಮ ಅವಧಿ ಮೇ ಅಂತ್ಯಕ್ಕೆ ಮುಕ್ತಾಯವಾದಾಗ ಮರುಆಯ್ಕೆ ಬಯಸುವುದಿಲ್ಲ ಎಂದಿದ್ದರು.ಟೆಲಿ-ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಸ್ಮಿತ್, ಕ್ರಿಕೆಟ್ ದಕ್ಷಿಣ ಆಫ್ರಿಕಾದ ಹಂಗಾಮಿ ಮುಖ್ಯ ನಿರ್ದೇಶಕ ಜಾಕ್ವೆಸ್ ಫೌಲ್ ಅವರು ಆಗಸ್ಟ್ ಅಂತ್ಯದಲ್ಲಿ ಭಾರತ ವಿರುದ್ಧ ಮೂರು ಪಂದ್ಯಗಳ ಟ್ವೆಂಟಿ -20 ಸರಣಿಯನ್ನು ಆತಿಥ್ಯ ವಹಿಸುವ ಯೋಜನೆಗಳ ಬಗ್ಗೆ ಹೇಳಿದ ಬಳಿಕ ಗಂಗೂಲಿ ಚುನಾವಣೆಗೆ ನಿಲ್ಲುವಂತೆ ಸೂಚಿಸಿದ್ದಾರೆ. 

ಪಂದ್ಯದ ದಿನಾಂಕಗಳು ಬದಲಾಗಬಹುದು, ಅಗತ್ಯವಾದರೆ ಪ್ರೇಕ್ಷಕರಿಲ್ಲದ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ ಎಂದು ಫೌಲ್ ಹೇಳಿದರು. ಗಂಗೂಲಿಯನ್ನು ಐಸಿಸಿಯ ಮುಖ್ಯಸ್ಥರನ್ನಾಗಿ ಮಾಡಲು ಸ್ಮಿತ್ ಕರೆ ನೀಡಿದ್ದನ್ನು ಸ್ವಾಗತಿಸುವುದಾಗಿ ಫೌಲ್ ಹೇಳಿದ್ದಾರೆ, ಆದರೆ ಇದು ಇನ್ನೂ ಸಿಎಸ್ಎ ಮಂಡಳಿಯು ಅನುಮೋದನೆ ಪಡೆಯಬೇಕಿದೆ  ಎಂದು ಎಚ್ಚರಿಸಿದ್ದಾರೆ.

ಸಿಎಸ್ಎ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಶೂಯಿಬ್ ಮಂಜ್ರಾ, ಪ್ರಸ್ತುತ ಪರಿಸ್ಥಿತಿಗಳಲ್ಲಿ, ಪ್ರವಾಸದ ಮೊದಲು ಮತ್ತು ನಂತರ 14 ದಿನಗಳ ಕ್ವಾರಂಟೈನ್ ಆಗುವುದು  ಆಟಗಾರರಿಗೆ ಅಗತ್ಯವೆಂದು ಅವರು ಒಪ್ಪಿಕೊಂಡರು.

ಜುಲೈನಲ್ಲಿ ಪ್ರಾರಂಭವಾಗಲಿರುವ ವೆಸ್ಟ್ ಇಂಡೀಸ್‌ನ ದಕ್ಷಿಣ ಆಫ್ರಿಕಾದ ಪ್ರವಾಸವು ವಿಳಂಬವಾಗುವ ಸಾಧ್ಯತೆಯಿದೆ ಎಂದು ಸ್ಮಿತ್ ಹೇಳಿದ್ದಾರೆ, ಇದು ವೆಸ್ಟ್ ಇಂಡೀಸ್ ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಯೋಜನೆಗಳ ಅಂತಿಮಗೊಳಿಸುವಿಕೆಯನ್ನು ಅವಲಂಬಿಸಿರುತ್ತದೆ. ತಟಸ್ಥ ಸ್ಥಳಗಳಲ್ಲಿ ಪಂದ್ಯಗಳನ್ನು ಆಡುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!