ದ್ರಾವಿಡ್ 
ಕ್ರಿಕೆಟ್

ಲಾಕ್ ಡೌನ್ ಅವಧಿಯಲ್ಲಿ ಗುತ್ತಿಗೆರಹಿತ, ಅಂಡರ್ 19 ಆಟಗಾರರಿಗೆ ಮಾನಸಿಕ ಆರೋಗ್ಯ ತರಬೇತಿ: ರಾಹುಲ್ ದ್ರಾವಿಡ್

ಗುತ್ತಿಗೆ ರಹಿತ ಮತ್ತು 19 ವರ್ಷದೊಳಗಿನ ಕ್ರಿಕೆಟಿಗರ ಮಾನಸಿಕ ಸಮಸ್ಯೆಗಳನ್ನು ವೃತ್ತಿಪರರ ಸಹಾಯದ ಮೂಲಕ ಪರಿಹರಿಸಲಾಗಿದೆ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ. 

ನವದೆಹಲಿ: ಗುತ್ತಿಗೆ ರಹಿತ ಮತ್ತು 19 ವರ್ಷದೊಳಗಿನ ಕ್ರಿಕೆಟಿಗರ ಮಾನಸಿಕ ಸಮಸ್ಯೆಗಳನ್ನು ವೃತ್ತಿಪರರ ಸಹಾಯದ ಮೂಲಕ ಪರಿಹರಿಸಲಾಗಿದೆ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ. 

ರಾಜಸ್ಥಾನ ರಾಯಲ್ಸ್ ತಂಡದ ವೆಬಿನಾರ್ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು ಮಾತನಾಡಿದ ರಾಹುಲ್ ದ್ರಾವಿಡ್, ಲಾಕ್‌ಡೌನ್‌ ಸಮಯವು ಕ್ರಿಕೆಟಿಗರಿಗೆ ಅನಿಶ್ಚಿತತೆಯ ಅವಧಿಯಾಗಿದ್ದು, ಅವರ ಮೇಲೆ ಮಾನಸಿಕವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ.  ಹೀಗಾಗಿ ಗುತ್ತಿಗೆ ರಹಿತ ಮತ್ತು 19 ವರ್ಷದೊಳಗಿನ ಕ್ರಿಕೆಟಿಗರಿಗೆ ಮಾನಸಿಕ ಆರೋಗ್ಯ ತರಬೇತಿ ನೀಡಿ ಅವರ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದರು.

'ಇತ್ತೀಚಿನ ದಿನಗಳಲ್ಲಿ ಯುವ ಕ್ರಿಕೆಟಿಗರು ಎದುರಿಸುತ್ತಿರುವ ಮಾನಸಿಕ ತೊಂದರೆಗಳನ್ನು ನಿಭಾಯಿಸುವ ಪರಿಣಿತಿ ನಮಗಿಲ್ಲವೆಂದು ಒಬ್ಬ ಮಾಜಿ ಕ್ರಿಕೆಟಿಗ ಹಾಗೂ ತರಬೇತುದಾರನಾಗಿ ಒಪ್ಪಿಕೊಳ್ಳುತ್ತೇನೆ. ಆ ಕಾರಣ, ವೃತ್ತಿಪರರನ್ನು ಸಂಪರ್ಕಿಸಲು ಗುತ್ತಿಗೆ ರಹಿತ ಮತ್ತು 19  ವರ್ಷದೊಳಗಿನ ಕ್ರಿಕೆಟ್‌ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ. ಮಾನಸಿಕ ಸಮಸ್ಯೆಗಳ ಬಗ್ಗೆ ಹೇಳಿಕೊಳ್ಳುವುದು ಈ ಹಿಂದೆ ಕಳಂಕವೆಂಬಂತೆ ನೋಡಲಾಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಇಂದು ಒತ್ತಡದ ವಾತಾವರಣವಿದ್ದು, ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಚರ್ಚೆಗಳು  ನಡೆಯುತ್ತಿರುವುದು ಉತ್ತಮ ಬೆಳವಣಿಗೆ.

ಇದೇ ವೇಳೆ ಕ್ರಿಕೆಟ್ ಮತ್ತು ಯುವ ಕ್ರಿಕೆಟಿಗರ ಮನಃಸ್ಥಿತಿ ಕುರಿತು ಮಾತನಾಡಿದ ದ್ರಾವಿಡ್ ಈಗಿನ ಯುವ ಕ್ರಿಕೆಟಿಗರು ಭಾರತ ತಂಡಕ್ಕೆ ಆಯ್ಕೆಯಾಗಲೇಬೇಕು ಎಂಬ ಒತ್ತಡದೊಂದಿಗೇ ಕ್ರಿಕೆಟ್ ಆರಂಭಿಸುತ್ತಾರೆ. ನನ್ನನ್ನೇ ಉದಾಹರಣೆಗೆ ತೆಗೆದುಕೊಳ್ಳುವುದಾದರೆ ನಾನು ಪ್ರಥಮ ದರ್ಜೆ  ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದು 17ನೇ ವರ್ಷದಲ್ಲಿ ಆದರೆ ತಂಡಕ್ಕೆ ಆಯ್ಕೆಯಾಗಲು 5 ವರ್ಷಗಳ ಕಾಲ ಕಾಯಬೇಕಾಯಿತು. ಈ ಕಾಯುವಿಕೆಯ ಒತ್ತಡವನ್ನು ಈಗಿನ ಕ್ರಿಕೆಟಿಗರು ನಿಭಾಯಿಸುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT