ಅಂದು ಟಾಸ್ ಮಾಡುತ್ತಿರುವ ಧೋನಿ 
ಕ್ರಿಕೆಟ್

ಧೋನಿಗಾಗಿ 2011ರ ವಿಶ್ವಕಪ್‌ ಫೈನಲ್‌ನಲ್ಲಿ ಎರಡು ಬಾರಿ ಟಾಸ್‌: ಸಂಗಕ್ಕಾರ

ಟೀಮ್‌ ಇಂಡಿಯಾ 2011ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ 28 ವರ್ಷಗಳ ಸುದೀರ್ಘಾವಧಿಯ ನಂತರ ಏಕದಿನ ಕ್ರಿಕೆಟ್‌ನ ವಿಶ್ವ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿತ್ತು.

ನವದೆಹಲಿ: ಟೀಮ್‌ ಇಂಡಿಯಾ 2011ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ 28 ವರ್ಷಗಳ ಸುದೀರ್ಘಾವಧಿಯ ನಂತರ ಏಕದಿನ ಕ್ರಿಕೆಟ್‌ನ ವಿಶ್ವ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿತ್ತು.

ಅಂದಹಾಗೆ ಆ ಪಂದ್ಯದಲ್ಲಿ ಎರಡು ಬಾರಿ ಟಾಸ್‌ ಮಾಡಿದ ಘಟನೆಯನ್ನು ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ ಇದೀಗ ಸ್ಮರಿಸಿದ್ದಾರೆ. 

ಭಾರತ ತಂಡದ ಸ್ಟಾರ್‌ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಅವರ ಇನ್‌ಸ್ಟಾಗ್ರಾಮ್‌ ಸರಣಿ ಕಾರ್ಯಕ್ರಮವಾದ 'ರೆಮಿನೀಸ್‌ ವಿತ್‌ ಆಷ್‌' ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗಕ್ಕಾರ, ಅಂದು ಭಾರತ ತಂಡದ ನಾಯಕ ಧೋನಿ ಅಸಮಾಧಾನಗೊಂಡ ಕಾರಣ ಎರಡು ಬಾರಿ ಟಾಸ್‌ ಮಾಡಲಾಗಿತ್ತು ಎಂದಿದ್ದಾರೆ.

"ಅಂದು ಕ್ರೀಡಾಂಗಣದಲ್ಲಿ ಜನ ಸಾಗರವೇ ನೆರೆದಿತ್ತು. ಶ್ರೀಲಂಕಾದಲ್ಲಿ ಇಷ್ಟು ಪ್ರೇಕ್ಷಕರು ಇರುವುದಿಲ್ಲ. ಈ ಮೊದಲು ಈಡನ್‌ ಗಾರ್ಡನ್ಸ್‌ನಲ್ಲಿ ಇಂಥದ್ದೊಂದು ಅನುಭವವಾಗಿತ್ತು. ಮೊದಲ ಸ್ಲಿಪ್‌ನಲ್ಲಿದ್ದ ಫೀಲ್ಡರ್‌ ಬಳಿ ಮಾತನಾಡುವುದು ಕೂಡ ಕಷ್ಟವಾಗುತ್ತಿತ್ತು. ಅಷ್ಟು ಜನ ಸೇರಿದ್ದರು. ನಂತರ ವಾಂಖೆಡೆಯಲ್ಲಿ ಅಷ್ಟು ಪ್ರೇಕ್ಷಕರನ್ನು ಕಂಡೆ," ಎಂದು ಸಂಗಕ್ಕಾರ ಹೇಳಿದ್ದಾರೆ.

"ಅಂದಿನ ಟಾಸ್‌ ಈಗಲೂ ನೆನಪಿದೆ. ಮಾಹಿ ನೀವು ಟೇಲ್‌ ಎಂದಿದ್ದು ಅಲ್ಲವೆ ಅಂದರು. ನಾನು ಇಲ್ಲ ಹೆಡ್ಸ್‌ ಎಂದು ಹೇಳಿದೆ. ಮ್ಯಾಚ್‌ ರೆಫ್ರಿ ನಾನು ಟಾಸ್‌ ಗೆದ್ದಿದ್ದೇನೆ ಎಂದರು. ಮಾಹಿ ತಮಗೆ ಕೇಳಿಸಲಿಲ್ಲ ಎಂದರು. ಆಗ ಕೊಂಚ ಗೊಂದಲ ಸೃಷ್ಟಿಯಾಗಿತ್ತು. ಇದಕ್ಕೆ ಮಾಹಿ ಮತ್ತೊಮ್ಮೆ ಟಾಸ್‌ ಮಾಡೋಣ ಎಂದರು. ಮತ್ತೊಮ್ಮೆ ಹೆಡ್ಸ್‌ ಬಿದ್ದು ಟಾಸ್‌ ನಮ್ಮದಾಯಿತು," ಎಂದು ಲಂಕಾದ ದಿಗ್ಗಜ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್ ತಮ್ಮ ನೆನಪಿನಾಳ ಕೆದಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT