ಸಂಗ್ರಹ ಚಿತ್ರ 
ಕ್ರಿಕೆಟ್

ಸೋಲಿನೊಂದಿಗೆ ಪಂಜಾಬ್, ಗೆಲುವಿನೊಂದಿಗೆ ಚೆನ್ನೈ ಟೂರ್ನಿಯಿಂದ ಹೊರಕ್ಕೆ!

ಕೊನೆಯ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ಲೈ ಆಫ್ ಗೇರುವ ನಿರೀಕ್ಷೆ ಮೂಡಿಸಿದ್ದ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೊನೆಯ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ.

ಅಬುದಾಬಿ: ಕೊನೆಯ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ಲೈ ಆಫ್ ಗೇರುವ ನಿರೀಕ್ಷೆ ಮೂಡಿಸಿದ್ದ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೊನೆಯ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ.

ಯುವ ಆಟಗಾರ ರುತುರಾಜ್ ಗಯಾಕ್ವಾಡ್ (ಅಜೇಯ 62) ಇವರು ಟೂರ್ನಿಯಲ್ಲಿ ಬಾರಿಸಿದ ಸತತ ಮೂರನೇ ಅರ್ಧಶತಕ ಹಾಗೂ ಲುಂಗಿ ಗಿಡಿ (39ಕ್ಕೆ 3) ಅವರ ಬಿಗುವಿನ ದಾಳಿಯ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಮಣಿಸಿ, ಗೆಲುವಿನ ಮೂಲಕ ಅಭಿಯಾನ ಮುಗಿಸಿದೆ.

ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ 20 ಓವರ್ ಗಳಲ್ಲಿ 6 ವಿಕೆಟ್ ಗೆ 153 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಸಿಎಸ್ ಕೆ 18.5 ಓವರ್ ಗಳಲ್ಲಿ 1 ವಿಕೆಟ್ ಗೆ 154 ರನ್ ಕಲೆ ಹಾಕಿ ಅಬ್ಬರಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಪ್ಲೇ ಆಫ್ ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇನ್ನು ಕಿಂಗ್ಸ್ 12 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದು, ಮುಂದಿನ ಹಂತದ ರೇಸ್ ನಿಂದ ದೂರ ಸರಿದಿದೆ.

ಗುರಿಯನ್ನು ಹಿಂಬಾಲಿಸಿದ ಚೆನ್ನೈ ತಂಡದ ಸ್ಟಾರ್ ಆಟಗಾರ ರುತುರಾಜ್ ಹಾಗೂ ಫಾಫ್ ಡುಪ್ಲೇಸಿಸ್ ಅವರು ಮೊದಲ ವಿಕೆಟ್ ಗೆ 82 ರನ್ ಗಳ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ತಂಡ ಗೆಲುವಿನ ನಗೆ ಬೀರುವಲ್ಲಿ ಶ್ರಮಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT