ಕೊಹ್ಲಿ 
ಕ್ರಿಕೆಟ್

ನಾಯಕತ್ವದಿಂದ ಕೊಹ್ಲಿಯನ್ನು ಕಿತ್ತು ಹಾಕಿ: ವಿರಾಟ್ ನಾಯಕತ್ವ ಸಮರ್ಥಿಸಿಕೊಂಡ ಆರ್ ಸಿಬಿ ಕೋಚ್

ಐಪಿಎಲ್ 2020ರ ಎಲಿಮಿನೇಟರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ನವದೆಹಲಿ: ಐಪಿಎಲ್ 2020ರ ಎಲಿಮಿನೇಟರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ವಿರಾಟ್ ಸತತ ಎಂಟು ವರ್ಷಗಳ ಕಾಲ ತಮ್ಮ ನಾಯಕತ್ವದಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲದಿರುವ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಮುಖ್ಯ ಕೋಚ್ ಸೈಮನ್ ಕಟಿಚ್ ಅವರು ನಾಯಕ ವಿರಾಟ್ ಕೊಹ್ಲಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಒಂದು ಐಪಿಎಲ್ ಟೂರ್ನಿಯನ್ನು ಗೆಲ್ಲಿಸದ ಕೊಹ್ಲಿಯನ್ನು ಆರ್ ಸಿಬಿ ನಾಯಕತ್ವದಿಂದ ತೆಗೆಯಬೇಕು ಎಂದು ಗೌತಮ್ ಗಂಭೀರ್ ಆರಂಭಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸೈಮನ್ ಗೌತಮ್ ಗಂಭೀರ್ ಮತ್ತು ಕೊಹ್ಲಿ ನಡುವೆ ಮುಂದಿನಿಂದಲೂ ಭಿನ್ನಾಭಿಪ್ರಾಯಗಳು ಇವೆ. ಹೀಗಾಗಿ ಕೊಹ್ಲಿ ನಾಯಕತ್ವವನ್ನು ಗಂಭೀರ್ ಪ್ರಶ್ನಿಸುತ್ತಿದ್ದಾರೆ ಎಂದರು. 

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿ 7 ವಿಕೆಟ್ ನಷ್ಟಕ್ಕೆ 131 ರನ್ ಪೇರಿಸಿತ್ತು. ಸಾಧಾರಣ ಮೊತ್ತ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ 4 ವಿಕೆಟ್ ನಷ್ಟಕ್ಕೆ 132 ರನ್ ಬಾರಿಸಿ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT