ಸೌರವ್ ಗಂಗೂಲಿ 
ಕ್ರಿಕೆಟ್

ಐಪಿಎಲ್ 2020: ಬಯೋ ಬಬಲ್ ನಲ್ಲಿ ಮಾನಸಿಕವಾಗಿ ಕಠಿಣರಾಗಿರಬೇಕು; ಪ್ರತಿ ಆಟಗಾರನಿಗೂ ಧನ್ಯವಾದ ಹೇಳಿದ ಸೌರವ್ ಗಂಗೂಲಿ

ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

ದುಬೈ: ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

ಕೊರೊನಾ ವೈಸರ್‌ನ ಆತಂಕದ ಮಧ್ಯೆ ಸಾಕಷ್ಟು ಸವಾಲುಗಳ ಮಧ್ಯೆ ಯುಎಇನಲ್ಲಿ ಈ ಬಾರಿಯ ಟೂರ್ನಿಯನ್ನು ಆಯೋಜಿಸಲಾಗಿತ್ತು. ಪ್ರೇಕ್ಷಕರ ಅನುಪಸ್ಥಿತಿಯಲ್ಲೂ ಈ ಟೂರ್ನಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯಶಸ್ಸಿನ ಸಂತಸವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವ್ಯಕ್ತಪಡಿಸಿದ್ದಾರೆ. 

ಬುಧವಾರ ಟೂರ್ನಿಯ ಯಶಸ್ಸಿನ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದು, ಈ ಬಾರಿಯ ಐಪಿಎಲ್ ಟೂರ್ನಿ ನಡೆಯಲು ಸಾಧ್ಯವಾಗಿಸಿದ ಎಲ್ಲಾ ಫ್ರಾಂಚೈಸಿಗಳ ಪ್ರತಿಯೊಬ್ಬ ಆಟಗಾರನಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ. 

"ಬಿಸಿಸಿಐನ ಪದಾಧಿಕಾರಿಗಳ ಪರವಾಗಿ ಹಾಗೂ ವೈಯಕ್ತಿಕವಾಗಿ ಪ್ರತೀ ತಂಡದ ಎಲ್ಲಾ ಆಟಗಾರರಿಗೂ ಧನ್ಯವಾದಗಳು. ಕಠಿಣ ಬಯೋಬಬಲ್ ಮಧ್ಯೆಯೂ ಈ ಟೂರ್ನಿ ಯಶಸ್ವಿಯಾಗಿ ನಡೆಯುವುದನ್ನು ಸಾಧ್ಯವಾಗಿಸಿದ್ದೀರಿ. ನಿಜಕ್ಕೂ ಮಾನಸಿಕವಾಗಿ ಇದು ಕಠಿಣ. ಆದರೆ ನಿಮ್ಮ ಬದ್ಧತೆ ಭಾರತೀಯ ಕ್ರಿಕೆಟ್ ಏನು  ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT