ಸೌರವ್ ಗಂಗೂಲಿ 
ಕ್ರಿಕೆಟ್

ಐಪಿಎಲ್ 2020: ಬಯೋ ಬಬಲ್ ನಲ್ಲಿ ಮಾನಸಿಕವಾಗಿ ಕಠಿಣರಾಗಿರಬೇಕು; ಪ್ರತಿ ಆಟಗಾರನಿಗೂ ಧನ್ಯವಾದ ಹೇಳಿದ ಸೌರವ್ ಗಂಗೂಲಿ

ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

ದುಬೈ: ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

ಕೊರೊನಾ ವೈಸರ್‌ನ ಆತಂಕದ ಮಧ್ಯೆ ಸಾಕಷ್ಟು ಸವಾಲುಗಳ ಮಧ್ಯೆ ಯುಎಇನಲ್ಲಿ ಈ ಬಾರಿಯ ಟೂರ್ನಿಯನ್ನು ಆಯೋಜಿಸಲಾಗಿತ್ತು. ಪ್ರೇಕ್ಷಕರ ಅನುಪಸ್ಥಿತಿಯಲ್ಲೂ ಈ ಟೂರ್ನಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯಶಸ್ಸಿನ ಸಂತಸವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವ್ಯಕ್ತಪಡಿಸಿದ್ದಾರೆ. 

ಬುಧವಾರ ಟೂರ್ನಿಯ ಯಶಸ್ಸಿನ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದು, ಈ ಬಾರಿಯ ಐಪಿಎಲ್ ಟೂರ್ನಿ ನಡೆಯಲು ಸಾಧ್ಯವಾಗಿಸಿದ ಎಲ್ಲಾ ಫ್ರಾಂಚೈಸಿಗಳ ಪ್ರತಿಯೊಬ್ಬ ಆಟಗಾರನಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ. 

"ಬಿಸಿಸಿಐನ ಪದಾಧಿಕಾರಿಗಳ ಪರವಾಗಿ ಹಾಗೂ ವೈಯಕ್ತಿಕವಾಗಿ ಪ್ರತೀ ತಂಡದ ಎಲ್ಲಾ ಆಟಗಾರರಿಗೂ ಧನ್ಯವಾದಗಳು. ಕಠಿಣ ಬಯೋಬಬಲ್ ಮಧ್ಯೆಯೂ ಈ ಟೂರ್ನಿ ಯಶಸ್ವಿಯಾಗಿ ನಡೆಯುವುದನ್ನು ಸಾಧ್ಯವಾಗಿಸಿದ್ದೀರಿ. ನಿಜಕ್ಕೂ ಮಾನಸಿಕವಾಗಿ ಇದು ಕಠಿಣ. ಆದರೆ ನಿಮ್ಮ ಬದ್ಧತೆ ಭಾರತೀಯ ಕ್ರಿಕೆಟ್ ಏನು  ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT