ಸೌರವ್ ಗಂಗೂಲಿ 
ಕ್ರಿಕೆಟ್

ಐಪಿಎಲ್ 2020: ಬಯೋ ಬಬಲ್ ನಲ್ಲಿ ಮಾನಸಿಕವಾಗಿ ಕಠಿಣರಾಗಿರಬೇಕು; ಪ್ರತಿ ಆಟಗಾರನಿಗೂ ಧನ್ಯವಾದ ಹೇಳಿದ ಸೌರವ್ ಗಂಗೂಲಿ

ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

ದುಬೈ: ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

ಕೊರೊನಾ ವೈಸರ್‌ನ ಆತಂಕದ ಮಧ್ಯೆ ಸಾಕಷ್ಟು ಸವಾಲುಗಳ ಮಧ್ಯೆ ಯುಎಇನಲ್ಲಿ ಈ ಬಾರಿಯ ಟೂರ್ನಿಯನ್ನು ಆಯೋಜಿಸಲಾಗಿತ್ತು. ಪ್ರೇಕ್ಷಕರ ಅನುಪಸ್ಥಿತಿಯಲ್ಲೂ ಈ ಟೂರ್ನಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯಶಸ್ಸಿನ ಸಂತಸವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವ್ಯಕ್ತಪಡಿಸಿದ್ದಾರೆ. 

ಬುಧವಾರ ಟೂರ್ನಿಯ ಯಶಸ್ಸಿನ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದು, ಈ ಬಾರಿಯ ಐಪಿಎಲ್ ಟೂರ್ನಿ ನಡೆಯಲು ಸಾಧ್ಯವಾಗಿಸಿದ ಎಲ್ಲಾ ಫ್ರಾಂಚೈಸಿಗಳ ಪ್ರತಿಯೊಬ್ಬ ಆಟಗಾರನಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ. 

"ಬಿಸಿಸಿಐನ ಪದಾಧಿಕಾರಿಗಳ ಪರವಾಗಿ ಹಾಗೂ ವೈಯಕ್ತಿಕವಾಗಿ ಪ್ರತೀ ತಂಡದ ಎಲ್ಲಾ ಆಟಗಾರರಿಗೂ ಧನ್ಯವಾದಗಳು. ಕಠಿಣ ಬಯೋಬಬಲ್ ಮಧ್ಯೆಯೂ ಈ ಟೂರ್ನಿ ಯಶಸ್ವಿಯಾಗಿ ನಡೆಯುವುದನ್ನು ಸಾಧ್ಯವಾಗಿಸಿದ್ದೀರಿ. ನಿಜಕ್ಕೂ ಮಾನಸಿಕವಾಗಿ ಇದು ಕಠಿಣ. ಆದರೆ ನಿಮ್ಮ ಬದ್ಧತೆ ಭಾರತೀಯ ಕ್ರಿಕೆಟ್ ಏನು  ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT