ಎಂಎಸ್ ಧೋನಿ 
ಕ್ರಿಕೆಟ್

ಧೋನಿ ಸಿಎಸ್ ಕೆ ನಾಯಕತ್ವ ತ್ಯಜಿಸುವ ಸಾಧ್ಯತೆ ಇದೆ: ಸಂಜಯ್ ಬಂಗಾರ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಅವರು 2021ರ ಆವೃತ್ತಿಯಲ್ಲಿ ತಮ್ಮ ನಾಯಕತ್ವವನ್ನು ಬೇರೆ ಆಟಗಾರನಿಗೆ ನೀಡಲಿದ್ದಾರೆಂದು ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್‌ ಬಾಂಗರ್‌ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಇಂಡಿಯನ್ ಪ್ರೀಮಿಯರ್‌ ಲೀಗ್‌ ಆರಂಭವಾದಾಗಿನಿಂದಲೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಅವರು 2021ರ ಆವೃತ್ತಿಯಲ್ಲಿ ತಮ್ಮ ನಾಯಕತ್ವವನ್ನು ಬೇರೆ ಆಟಗಾರನಿಗೆ ನೀಡಲಿದ್ದಾರೆಂದು ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್‌ ಬಾಂಗರ್‌ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಧೋನಿ ಅವರು ಐಪಿಎಲ್ ವೇಳೆ ಫಾರ್ಮ್‌ನಲ್ಲೂ ಇರಲಿಲ್ಲ. ಹೀಗಾಗಿ ಮುಂದಿನ ಐಪಿಎಲ್‌ ವೇಳೆ ಧೋನಿ ಅವರು ತಾವಾಗಿಯೇ ನಾಯಕತ್ವವನ್ನು ಫಾಫ್ ಡು ಪ್ಲೆಸಿಸ್‌ಗೆ ಬಿಟ್ಟುಕೊಡಬಹುದು ಎಂದು ಬಂಗಾರ್ ಹೇಳಿದ್ದಾರೆ.

'ಟೀಂ ಇಂಡಿಯಾ ನಾಯಕತ್ವದ ವಿಚಾರದಲ್ಲೂ ಕಷ್ಟ ಅನ್ನಿಸಿದಾಗ ಎಂಎಸ್ ಧೋನಿ, ನಾಯಕತ್ವವನ್ನು ವಿರಾಟ್ ಕೊಹ್ಲಿಗೆ ಹಸ್ತಾಂತರಿಸಿದ್ದರು. ಹೀಗಾಗಿ ಮುಂದಿನ ವರ್ಷ ಧೋನಿ ನಾಯಕರಾಗಿ ಆಡದೆ ಸಾಮಾನ್ಯ ಆಟಗಾರನಾಗಿ ಆಡಲಿದ್ದಾರೆ. ನಾಯಕತ್ವವನ್ನು ಡು ಪ್ಲೆಸಿಸ್‌ಗೆ ಬಿಡುಕೊಡಲಿದ್ದಾರೆ ಅನ್ನಿಸುತ್ತದೆ,' ಎಂದು ಬಂಗಾರ್ ಸ್ಟಾರ್‌ಸ್ಪೋರ್ಟ್ಸ್‌ ಗೆ ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯವಾಗಿದ್ದ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಎಂಎಸ್‌ ಧೋನಿ ನಾಯಕತ್ವದ ಸಿಎಸ್‌ಕೆ ಅತ್ಯಂತ ಕೆಟ್ಟ ಪ್ರದರ್ಶನ ನೀಡಿತ್ತು. ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಪ್ಲೇಆಫ್ಸ್‌ನಿಂದ ಹೊರ ನಡೆಯಿತು. ಕಳೆದ ಆಗಸ್ಟ್‌ 15 ರಂದು ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. 2019ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್ ಹಣಾಹಣಿಯಲ್ಲಿ ಎಂಎಸ್‌ ಧೋನಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT