ವೃದ್ಧಿಮನ್ ಸಹಾ 
ಕ್ರಿಕೆಟ್

ವೃದ್ಧಿಮಾನ್ ಸಹಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಫಿಟ್ ಆಗಲಿದ್ದಾರೆ: ಸೌರವ್ ಗಂಗೂಲಿ

 ಗಾಯದ ಸಮಸ್ಯೆಯಿಂದ  ಚಿಕಿತ್ಸೆ ಪಡೆಯುತ್ತಿರುವ ವಿಕೆಟ್ ಕೀಪರ್ ವೃದ್ಧಿಮನ್ ಸಹಾ ಬಗ್ಗೆ ಯಾವುದೇ ಅನುಮಾನವಿಲ್ಲಾ, ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಫಿಟ್ ಆಗಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಮುಂಬೈ: ಗಾಯದ ಸಮಸ್ಯೆಯಿಂದ  ಚಿಕಿತ್ಸೆ ಪಡೆಯುತ್ತಿರುವ ವಿಕೆಟ್ ಕೀಪರ್ ವೃದ್ಧಿಮನ್ ಸಹಾ ಬಗ್ಗೆ ಯಾವುದೇ ಅನುಮಾನವಿಲ್ಲಾ, ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಫಿಟ್ ಆಗಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಐಪಿಲ್ ವೇಳೆಯಲ್ಲಿ ಮಂಡಿರಜ್ಜು ಗಾಯದಿಂದಾಗಿ ಫ್ಲೇ ಆಫ್ ಪಂದ್ಯಗಳಿಂದ ಹೊರಗುಳಿದಿದ್ದ ವೃದ್ಧಿ ಮನ್ ಸಹಾ, ಟೀಂ ಇಂಡಿಯಾದ ಉತ್ತಮ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ನವೆಂಬರ್ 27ರಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ಟೂರ್ನಿಯಲ್ಲಿ ಶಹಾ ಆಡುವ ಬಗ್ಗೆ ತಡವಾಗಿ ತಿಳಿಸುವುದಾಗಿ ಬಿಸಿಸಿಐ ಕಳೆದ ವಾರ ಹೇಳಿಕೆ ನೀಡಿತ್ತು. 

ಆಟಗಾರರಿಗೆ ಗಾಯದ ಸಮಸ್ಯೆ ನಿರ್ವಹಣೆಯಲ್ಲಿ ಬಿಸಿಸಿಐ ವಿರುದ್ಧದ ಟೀಕೆಗಳನ್ನು ನಿರಾಕರಿಸಿರುವ ಗಂಗೂಲಿ, ಬಿಸಿಸಿಐ ಹೇಗೆ ಕಾರ್ಯನಿರ್ವಹಿಸಲಿದೆ ಎಂಬುದು ಜನರಿಗೆ ಗೊತ್ತಿಲ್ಲ. ವೃದ್ಧಿ ಮನ್ ಸಹಾ ಅವರಿಗೆ ಗಾಯವಾಗಿರುವುದು ಬಿಸಿಸಿಐ ತರಬೇತಿದಾರರು, ಪಿಜಿಸಿಯೋ ಅವರಿಗೆ ಗೊತ್ತಿದೆ. ವೃದ್ಧಿಮನ್ ಸಹಾ ಟೆಸ್ಟ್ ಪಂದ್ಯಗಳಿಗೆ ಫಿಟ್ ಆಗಲಿದ್ದು, ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ರೋಹಿತ್ ಶರ್ಮಾ ಅವರ ವಿಚಾರದಲ್ಲೂ ಗಾಯದ ಸಮಸ್ಯೆ ತೀವ್ರ ಚರ್ಚೆಗೆ ಒಳಪಟ್ಟಿತ್ತು. ಐಪಿಎಲ್ ವೇಳೆಯಲ್ಲಿ ತೀವ್ರ ಗಾಯದ ಸಮಸ್ಯೆಯಿಂದಾಗಿ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಪರಿಗಣಿಸುತ್ತಿಲ್ಲ ಎನ್ನಲಾಗಿತ್ತು. ಆದರೆ, ರೋಹಿತ್ ಮುಂದಾಳತ್ವದ  ಮುಂಬೈ ಇಂಡಿಯನ್ಸ್  ಐದನೇ ಬಾರಿಗೆ  ಟ್ರೋಫಿ ಎತ್ತಿಹಿಡಿದು ದಾಖಲೆ ಮಾಡಿತ್ತು. ತದ ನಂತರ ಆಸ್ಟ್ರೇಲಿಯಾ ಸರಣಿಯ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡರು.

ರೋಹಿತ್ ಶರ್ಮಾ ಶೇ. 70 ರಷ್ಟು ಫಿಟ್ ಆಗಿದ್ದಾರೆ. ಅದ್ದರಿಂದಲೇ ಅವರು ಏಕದಿನ ಹಾಗೂ ಟಿ-20 ಪಂದ್ಯಗಳಲ್ಲಿ ಆಡುತ್ತಿಲ್ಲ. ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಆಡುತ್ತಿರುವುದಾಗಿ ಸೌರವ್ ಗಂಗೂಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT