ಶಕೀಬ್‌ ಅಲ್‌ ಹಸನ್‌ 
ಕ್ರಿಕೆಟ್

ಬಾಂಗ್ಲಾದೇಶ ಸ್ಟಾರ್‌ ಆಲ್‌ರೌಂಡರ್‌ ಶಕೀಬ್‌ ಅಲ್‌ ಹಸನ್‌ ಗೆ ಕೊಲೆ ಬೆದರಿಕೆ

2019ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡರಲ್ಲೂ ಗಮನಾರ್ಹ ಪ್ರದರ್ಶನ ತೋರಿದ್ದ ಬಾಂಗ್ಲಾದೇಶ ತಂಡದ ಸ್ಟಾರ್‌ ಆಲ್‌ರೌಂಡರ್‌ ಶಕೀಬ್‌ ಅಲ್‌ ಹಸನ್‌ ಅವರಿಗೆ ತಮ್ಮದೇ ದೇಶದ ಯುವನೊಬ್ಬ ಫೇಸ್‌ಬುಕ್‌ ಲೈವ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ.

ನವದೆಹಲಿ: 2019ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡರಲ್ಲೂ ಗಮನಾರ್ಹ ಪ್ರದರ್ಶನ ತೋರಿದ್ದ ಬಾಂಗ್ಲಾದೇಶ ತಂಡದ ಸ್ಟಾರ್‌ ಆಲ್‌ರೌಂಡರ್‌ ಶಕೀಬ್‌ ಅಲ್‌ ಹಸನ್‌ ಅವರಿಗೆ ತಮ್ಮದೇ ದೇಶದ ಯುವನೊಬ್ಬ ಫೇಸ್‌ಬುಕ್‌ ಲೈವ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ.

ಇತ್ತೀಚೆಗೆ ಶಕೀಬ್‌ ಅಲ್‌-ಹಸನ್‌ ಕೋಲ್ಕತ್ತಾಗೆ ಆಗಮಿಸಿ ಕಾಳಿ ಮಾತಾ ಪೂಜೆಯಲ್ಲಿ ಭಾಗಿಯಾಗಿದ್ದರು. ಇದರಿಂದ ತೀವ್ರ ಆಕ್ರೋಶಕ್ಕೆ ಒಳಗಾದ ಮೂಲಭೂತವಾದಿಗಳ ಒಂದು ವರ್ಗ ಅವರ ವಿರುದ್ಧ ಹಲವು ಬೆದರಿಕೆಗಳು ಹಾಕಿದ್ದರು. ಅಲ್ಲದೆ,  ಸಿಲ್ಹೆಟ್‌ನ ಶಹಪುರ್ ತಾಲ್ಲೂಕಿನ ಪ್ಯಾರಾ ನಿವಾಸಿ ಮೊಹ್ಸಿನ್ ತಾಲ್ಲೂಕ್ದರ್ ಎಂಬ ಯುವಕ ಭಾನುವಾರ ಮಧ್ಯಾಹ್ನ 12.06 ಕ್ಕೆ ಫೇಸ್‌ಬುಕ್ ಲೈವ್ ಪ್ರಾರಂಭಿಸಿದರು.

ಫೇಸ್‌ಬುಕ್ ಲೈವ್‌ನಲ್ಲಿ ಯುವಕ, ನೀವು(ಶಕೀಬ್‌) ಕೋಲ್ಕತಾ ಕಾಳಿ ಮಾತೆ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳಿ ಮುಸ್ಲಿಂರ ಭಾವನೆಗಳಿಗೆ ದಕ್ಕೆ ತಂದಿದ್ದೀರಿ. ನಿಮ್ಮನ್ನು ಕತ್ತಿಯಿಂದ ತುಂಡು-ತುಂಡಾಗಿ ಕತ್ತರಿಸುತ್ತೇನೆ ಹಾಗೂ ಅಗತ್ಯವಿದ್ದರೆ, ಸಿಲ್ಹೆಟ್ ನಿಂದ ಢಾಕಾಗೆ ಬಂದು ಕತ್ತಿಯಿಂದ ಕೊಲ್ಲುವುದಾಗಿ ಶಕೀಬ್‌ಗೆ ಎಚ್ಚರಿಕೆ ನೀಡಿದ್ದಾನೆ.

ಈ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಕ್ರಿಕೆಟ್‌ನೆಕ್ಸ್ಟ್‌ನಲ್ಲಿ ಉಲ್ಲೇಖಿಸಿದಂತೆ, ಸಿಲ್ಹೆಟ್ ಪೊಲೀಸ್ ಹೆಚ್ಚುವರಿ ಉಪ ಆಯುಕ್ತ ಬಿ.ಎಂ. ಅಶ್ರಫ್ ಉಲ್ಲಾ ತಾಹೆರ್ ಅವರು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಈ ವಿಷಯದ ಬಗ್ಗೆ ಎಚ್ಚರಗೊಂಡಿದ್ದೇವೆ. ಯುವಕನ ಫೇಸ್‌ಲೈವ್‌ ವಿಡಿಯೋ ಲಿಂಕ್‌ ಅನ್ನು ಸೈಬರ್‌ ಬ್ರಾಂಚ್‌ಗೆ ನೀಡಿದ್ದೇವೆ. ಅತಿ ಶೀಘ್ರದಲ್ಲಿಯೇ ಕಾನೂನು ಕ್ರಮವನ್ನು ಜರುಗಿಸಲಾಗುವುದು,” ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT