ವಿವಿಎಸ್ ಲಕ್ಷ್ಮಣ್ 
ಕ್ರಿಕೆಟ್

ಆಸೀಸ್‌ ವಿರುದ್ಧದ ಟಿ20 ಸರಣಿಗೆ ನಟರಾಜನ್‌ ಭಾರತ ತಂಡದ ವಿಶೇಷ ಅಸ್ತ್ರ: ವಿವಿಎಸ್‌ ಲಕ್ಷ್ಮಣ್

ಆಸ್ಟ್ರೇಲಿಯಾ ಪ್ರವಾಸಕ್ಕೆ ಪ್ರಕಟಿಸಿದ ಟೀಮ್‌ ಇಂಡಿಯಾಗೆ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿತ್ತು. ಹೀಗಾಗಿ ತಂಡ ಆಸೀಸ್‌ ಪ್ರವಾಸಕ್ಕೆ ವಿಮಾನ ಹತ್ತುವ ಮೊದಲು ಪರಿಷ್ಕೃತ ತಂಡವನ್ನು ಪ್ರಕಟಿಸಲಾಯಿತು.

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ಪ್ರಕಟಿಸಿದ ಟೀಮ್‌ ಇಂಡಿಯಾಗೆ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿತ್ತು. ಹೀಗಾಗಿ ತಂಡ ಆಸೀಸ್‌ ಪ್ರವಾಸಕ್ಕೆ ವಿಮಾನ ಹತ್ತುವ ಮೊದಲು ಪರಿಷ್ಕೃತ ತಂಡವನ್ನು ಪ್ರಕಟಿಸಲಾಯಿತು.

ಇನ್ನು ಭಾರತ ತಂಡಗಳಲ್ಲಿ ಇಬ್ಬರು ಯುವ ವೇಗಿಗಳಿಗೆ ಸ್ಥಾನ ಸಿಕ್ಕಿದೆ. ಟೆಸ್ಟ್‌ ಕ್ರಿಕೆಟ್‌ಗೆ ಮೊಹಮ್ಮದ್‌ ಸಿರಾಜ್‌ ಅವರ ಆಯ್ಕೆ ಅಚ್ಚರಿ ತಂದರೆ, ಮತ್ತೊಂದೆಡೆ ಮಾಂತ್ರಿಕ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಗಾಯಗೊಂಡಿದ್ದ ಕಾರಣ ಅವರ ಸ್ಥಾನದಲ್ಲಿ ಎಡಗೈ ವೇಗದ ಬೌಲರ್‌ ಟಿ ನಟರಾಜನ್‌ಗೆ ಟೀಮ್‌ ಇಂಡಿಯಾ ಟಿ20 ತಂಡದ ಟಿಕೆಟ್‌ ಲಭ್ಯವಾಗಿತ್ತು.

13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ಆಡಿದ ತಮಿಳುನಾಡಿನ ಯುವ ಎಡಗೈ ವೇಗಿ ತಮ್ಮ ಅದ್ಭುತ ಯಾರ್ಕರ್‌ಗಳು ಮತ್ತು ಮಾರಕ ಬೌನ್ಸರ್‌ಗಳು ಮೂಲಕ ಬ್ಯಾಟ್ಸ್‌ಮನ್‌ಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿ ಎಲ್ಲರ ಗಮನ ಸೆಳೆದಿದ್ದರು. ಅವರ ಈ ಮನಮೋಹಕ ಪ್ರದರ್ಶನದ ಫಲವೇ ಇದೀಗ ಭಾರತ ತಂಡದ ಪರ ಆಡುವ ಅವಕಾಶ ತಂದುಕೊಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT