ಕ್ರಿಕೆಟ್

ಗಟ್ಟಿ ವ್ಯಕ್ತಿತ್ವದ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿಯಾಗುವ ಸಾಧ್ಯತೆ - ಸೌರವ್ ಗಂಗೂಲಿ

Nagaraja AB

ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗಲೇ ಶುಕ್ರವಾರ ಅವರ ತಂದೆ ನಿಧನರಾಗಿದ್ದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟ್ವಿಟರ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ನಷ್ಟದಿಂದ ಹೊರಬರುವ ಅಪಾರ ಶಕ್ತಿಯನ್ನು ಸಿರಾಜ್ ಹೊಂದಿದ್ದು, ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುವುದಾಗಿ ಟ್ವೀಟ್ ಮಾಡಿದ್ದಾರೆ.

ಐಪಿಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡಾ ತೀವ್ರ ಸಂತಾಪ ವ್ಯಕ್ತಪಡಿಸಿದೆ. 

 ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾ ಟೆಸ್ಟ್ ತಂಡದ ಭಾಗವಾಗಿ ಸಿಡ್ನಿಯಲ್ಲಿ ಕ್ವಾರಂಟೈನ್ ಹಬ್ ನಲ್ಲಿದ್ದಾರೆ. ಕೋವಿಡ್-19 ನಿರ್ಬಂಧದ ಕಾರಣ ಅವರು ತಂದೆಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಹಿಂತಿರುಗಲು ಸಾಧ್ಯವಾಗಿಲ್ಲ.
 

SCROLL FOR NEXT