ಆರ್ ಸಿಬಿ 
ಕ್ರಿಕೆಟ್

ಐಪಿಎಲ್‌-2020: ಬುಕ್ಕಿಗಳು ದುಬೈಗೆ ಬಂದಿದ್ದು, ಅಂದುಕೊಂಡದ್ದನ್ನು ಮಾಡಲು ವಿಫಲರಾಗಿದ್ದಾರೆ- ಬಿಸಿಸಿಐ

ಚಿನ್ನದ ಮೊಟ್ಟೆ ಇಡುವ ಐಪಿಎಲ್ ನಲ್ಲಿ ತಮ್ಮ ಕೈಚಳಕ ತೋರಿಸಲು ಬುಕ್ಕಿಗಳು ದುಬೈಗೆ ಬಂದಿದ್ದು ಆದರೆ ಅವರ ಆಟ ನಡೆಯಲಿಲ್ಲ ಎಂದು ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥ ಅಜಿತ್ ಸಿಂಗ್ ಹೇಳಿದ್ದಾರೆ.

ದುಬೈ: ಚಿನ್ನದ ಮೊಟ್ಟೆ ಇಡುವ ಐಪಿಎಲ್ ನಲ್ಲಿ ತಮ್ಮ ಕೈಚಳಕ ತೋರಿಸಲು ಬುಕ್ಕಿಗಳು ದುಬೈಗೆ ಬಂದಿದ್ದು ಆದರೆ ಅವರ ಆಟ ನಡೆಯಲಿಲ್ಲ ಎಂದು ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥ ಅಜಿತ್ ಸಿಂಗ್ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಅಭಿಮಾನಿಗಳಲ್ಲಿ ಮಾತ್ರವಲ್ಲ, ಸಾವಿರಾರು ಕೋಟಿ ಆದಾಯ ತಂದುಕೊಡುವ ಶ್ರೀಮಂತ ಕ್ರಿಕೆಟ್ ಟೂರ್ನಿಯಾಗಿದ್ದು ಅದರ ಮೇಲೆ ಬುಕ್ಕಿಗಳ ಕಣ್ಣು ಬಿದ್ದಿತ್ತು. ತ್ವರಿತಗತಿಯಲ್ಲಿ ಹಣ ಸಂಪಾದಿಸುವ ಸಲುವಾಗಿ ಬುಕ್ಕಿಗಳು ದುಬೈಗೆ ಬಂದಿದ್ದಾರೆ. ಆದರೆ ಅವರು ತಾವು ಅಂದುಕೊಂಡಂತೆ ಸ್ಫಾಟ್ ಫಿಕ್ಸಿಂಗ್ ಮಾಡಲು ಸಾಧ್ಯವಾಗಿಲ್ಲ ಎಂದು ಅಜಿತ್ ಸಿಂಗ್ ಹೇಳಿದ್ದಾರೆ. 

ಎಎನ್‌ಐ ಜೊತೆ ಮಾತನಾಡಿದ ಎಸಿಯು ಮುಖ್ಯಸ್ಥರು, ಬುಕ್ಕಿಗಳು ದುಬೈಗೆ ಬಂದಿದ್ದಾರೆ ಎಂಬುದು ತಂಡದ ಗಮನಕ್ಕೆ ಬಂದಿದೆ. ಆದರೆ ಪಂದ್ಯಾವಳಿಯ ಪಾವಿತ್ರ್ಯವನ್ನು ಮುರಿಯುವಲ್ಲಿ ಅವರು ಯಾವುದೇ ಪ್ರಗತಿಯನ್ನು ಸಾಧಿಸಲಿಲ್ಲ ಎಂದು ಅವರು ಹೇಳಿದರು.

"ದುಬೈನಲ್ಲಿ ಬುಕ್ಕಿಗಳು ಇದ್ದಾರೆ, ಆದರೆ ಅವರಿಗೆ ಯಾವುದೇ ಮುನ್ನಡೆಯಲು ಸಾಧ್ಯವಾಗಲಿಲ್ಲ. ಇಲ್ಲಿಯವರೆಗೆ ಎಲ್ಲವೂ ಸುಗಮ ನಡೆಯುತ್ತಿವೆ. ಎಮಿರೇಟ್ಸ್ ಕ್ರಿಕೆಟ್ ಮಂಡಳಿ(ಇಸಿಬಿ ) ಮತ್ತು ಸ್ಥಳೀಯ ಪೊಲೀಸರು ಬಹಳ ಸಹಾಯಕವಾಗಿದ್ದಾರೆ ಎಂದು ಅವರು ಬಹಿರಂಗಪಡಿಸಿದರು.

ವಾಸ್ತವವಾಗಿ, ಭಾರತದಲ್ಲಿ ಪ್ರತಿ ಬಾರಿಯೂ ನಡೆಯುವ ಬೆಟ್ಟಿಂಗ್ ಚಟುವಟಿಕೆಗಳನ್ನು ಪತ್ತೆಹಚ್ಚುವ ಪೊಲೀಸರ ವರದಿಗಳನ್ನು ನಾವು ಪಡೆಯುತ್ತಿದ್ದೇವೆ ಎಂದು ಸಿಂಗ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT