ಎಬಿಡಿ ವಿಲಿಯರ್ಸ್ 
ಕ್ರಿಕೆಟ್

ಆಟಕ್ಕೆ ನೀವು ಬೇಕಾಗಿದೆ: ಅಂತಾರಾಷ್ಟ್ರೀಯ ನಿವೃತ್ತಿಯಿಂದ ಎಬಿಡಿ ವಿಲಿಯರ್ಸ್ ಹೊರಬರಲು ರವಿಶಾಸ್ತ್ರಿ ಆಗ್ರಹ

ಅಂತಾರಾಷ್ಟ್ರೀಯ ಕ್ರಿಕಟ್ ನಿವೃತ್ತಿಯಿಂದ ಹೊರಬರುವಂತೆ ದಕ್ಷಿಣ ಆಫ್ರಿಕಾ ಮಾಜಿ ಕ್ಯಾಪ್ಟನ್ ಎಬಿಡಿ ವಿಲಿಯರ್ಸ್ ಗೆ  ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿ ಶಾಸ್ತ್ರಿ ಆಗ್ರಹಿಸಿದ್ದಾರೆ.

ಶಾರ್ಜಾ: ಅಂತಾರಾಷ್ಟ್ರೀಯ ಕ್ರಿಕಟ್ ನಿವೃತ್ತಿಯಿಂದ ಹೊರಬರುವಂತೆ ದಕ್ಷಿಣ ಆಫ್ರಿಕಾ ಮಾಜಿ ಕ್ಯಾಪ್ಟನ್ ಎಬಿಡಿ ವಿಲಿಯರ್ಸ್ ಗೆ  ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿ ಶಾಸ್ತ್ರಿ ಆಗ್ರಹಿಸಿದ್ದಾರೆ.

ಶಾರ್ಜಾದಲ್ಲಿ ನಡೆದ ಐಪಿಎಲ್ 20-20 ಪಂದ್ಯದಲ್ಲಿ ಆರ್ ಸಿಬಿ ಆಟಗಾರ  ಕೊಲ್ಕೋತ್ತಾ ನೈಟ್ ರೈಡರ್ಸ್  ವಿರುದ್ಧ ಎಬಿಡಿ ವಿಲಿಯರ್ಸ್ 73 ರನ್ ಗಳಿಸಿದ್ದರು.  33 ಬಾಲ್ ಗಳಿಗೆ 5 ಫೋರ್ ಮತ್ತು ಆರು ಸಿಕ್ಸ್ ಬಾರಿಸಿ ಆರ್ ಸಿಬಿ ತಂಡ 194/2 ರನ್ ಸಂಗ್ರಹಿಸಲು ನೆರವಾದರು. 

ನಿನ್ನೆ ನೋಡಿದ್ದು ಅವಾಸ್ತವ ಸಂಗತಿಯಾಗಿದೆ, ಎಬಿಡಿ ವಿಲಿಯರ್ಸ್ ಮತ್ತೆ ಆಟವಾಡಲು ಎಚ್ಚರವಾಗಿದ್ದಾರೆ ಎಂಬ ಭಾವನೆ ಮೂಡಿತು. ಆಟಕ್ಕೆ ನೀವು ಬೇಕಾಗಿದೆ, ಹೀಗಾಗಿ ಅಂತರಾಷ್ಟ್ರೀಯ ಪಂದ್ಯಗಳ ನಿವೃತ್ತಿಯಿಂದ ನೀವು ಹೊರಬರಬೇಕು, ಆಗ ಆಟ ಇನ್ನೂ ಚೆನ್ನಾಗಿರುತ್ತದೆ ಎಂದು ರವಿಶಾಸ್ತ್ರಿ ಟ್ವೀಟ್ ಮಾಡಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ ಸ್ಫೋಟಕ ಆರಂಭ ಪಡೆದುಕೊಂಡಿತು. ಪವರ್ ಪ್ಲೇ ಅನ್ನು ಅತ್ಯುತ್ತಮವಾಗಿ ಉಪಯೋಗಿಸಿಕೊಂಡ ಓಪನರ್​ಗಳಾದ ಆ್ಯರೋನ್ ಫಿಂಚ್ ಹಾಗೂ ದೇವದತ್ ಪಡಿಕ್ಕಲ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಅದರಂತೆ ಈ ಜೋಡಿ ಮೊದಲ 6 ಓವರ್​ನಲ್ಲಿ 47 ರನ್ ಕಲೆಹಾಕಿತು. 8ನೇ ಓವರ್​ನ ರಸೆಲ್ ಬೌಲಿಂಗ್​ನಲ್ಲಿ
ಪಡಿಕ್ಕಲ್ ಬೋಲ್ಡ್​   ಈ ಜೋಡಿ 67 ರನ್​ಗಳ ಜೊತೆಯಾಟ ಆಡಿತು. ನಂತರ ಫಿಂಚ್ 37 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಬಾರಿಸಿ 47 ರನ್​​ಗೆ ಔಟ್ ಆದರು. ಬಳಿಕ ಕೊಹ್ಲಿ ಜೊತೆಯಾದ ಎಬಿ ಡಿವಿಲಿಯರ್ಸ್​ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಎಬಿಡಿ ವಿಲಿಯರ್ಸ್ 2018 ರಲ್ಲಿ ನಿವೃತ್ತಿ ಹೊಂದುವ ಮೊದಲು ರಾಷ್ಟ್ರೀಯ ತಂಡಕ್ಕಾಗಿ 114 ಟೆಸ್ಟ್, 228 ಏಕದಿನ ಮತ್ತು 78 ಟಿ 20  ಪಂದ್ಯಗಳನ್ನು ಆಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT