ಧೋನಿ-ಸುನಿಲ್ ಗವಾಸ್ಕರ್ 
ಕ್ರಿಕೆಟ್

ವೈಡ್‌ ಬಾಲ್‌ ವಿವಾದ: ಎಂಎಸ್ ಧೋನಿ ಗೆ ಸುನೀಲ್‌ ಗವಾಸ್ಕರ್‌ ಬೆಂಬಲ

'ವೈಡ್‌ ಬಾಲ್‌' ವಿವಾದಕ್ಕೆ ಸಂಬಂಧಿಸಿದಂತೆ ಟೀಕೆಗೆ ಗುರಿಯಾಗಿರುವ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್‌ ಅವರಿಗೆ ಭಾರತೀಯ ಕ್ರಿಕೆಟ್‌ ದಂತಕತೆ ಹಾಗೂ 2020ರ ಐಪಿಎಲ್‌ನ ಕಾಮೆಂಟರಿ ಪ್ಯಾನೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುನೀಲ್ ಗವಾಸ್ಕರ್‌ ಬೆಂಬಲ ಸೂಚಿಸಿದ್ದಾರೆ.

ದುಬೈ: 'ವೈಡ್‌ ಬಾಲ್‌' ವಿವಾದಕ್ಕೆ ಸಂಬಂಧಿಸಿದಂತೆ ಟೀಕೆಗೆ ಗುರಿಯಾಗಿರುವ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್‌ ಅವರಿಗೆ ಭಾರತೀಯ ಕ್ರಿಕೆಟ್‌ ದಂತಕತೆ ಹಾಗೂ 2020ರ ಐಪಿಎಲ್‌ನ ಕಾಮೆಂಟರಿ ಪ್ಯಾನೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುನೀಲ್ ಗವಾಸ್ಕರ್‌ ಬೆಂಬಲ ಸೂಚಿಸಿದ್ದಾರೆ.

ಮಂಗಳವಾರ ರಾತ್ರಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಪಂದ್ಯದಲ್ಲಿ ಈ ವಿವಾದ ಸೃಷ್ಠಿಯಾಗಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್, ನಿಗದಿತ 20 ಓವರ್‌ಗಳಿಗೆ 6 ವಿಕೆಟ್‌ಗಳ ನಷ್ಟಕ್ಕೆ 167 ರನ್‌ಗಳನ್ನು ದಾಖಲಿಸಿತು. ಬಳಿಕ ಗುರಿ ಹಿಂಬಾಲಿಸಿದ ಸನ್‌ರೈಸರ್ಸ್ ಹೈದರಾಬಾದ್‌ ನಿಗದಿತ 20 ಓವರ್‌ಗಳಿಗೆ 8 ವಿಕೆಟ್‌ಗಳನ್ನು ಕಳೆದುಕೊಂಡು 147 ರನ್‌ಗಳಿಗೆ ಸೀಮಿತವಾಯಿತು. ಆ ಮೂಲಕ 20 ರನ್‌ಗಳಿಂದ ಸಿಎಸ್‌ಕೆ ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿತು.

ಸನ್‌ರೈಸರ್ಸ್ ಹೈದರಾಬಾದ್‌ ಇನಿಂಗ್ಸ್‌ನ 19ನೇ ಓವರ್‌ನಲ್ಲಿ ಎಂಎಸ್‌ ಧೋನಿ ಹಾಗೂ ಅಂಪೈರ್‌ ನಡುವೆ ಈ ಘಟನೆ ನಡೆದಿತ್ತು. 18ನೇ ಓವರ್‌ನಲ್ಲಿ 19 ರನ್‌ಗಳನ್ನು ಗಳಿಸಿದ್ದ ಎಸ್ಆರ್‌ಎಚ್‌, ಕೊನೆಯ ಎರಡು ಓವರ್‌ಗಳಲ್ಲಿ 27 ರನ್‌ಗಳ ಅಗತ್ಯವಿತ್ತು, 19ನೇ ಓವರ್‌ನ ಮೊದಲನೇ ಎಸೆತದಲ್ಲಿ ಶಾರ್ದೂಲ್‌ ಠಾಕೂರ್‌ ಎರಡು ರನ್‌ಗಳನ್ನು ನೀಡಿದರು. 

ಬಳಿಕ ಎರಡನೇ ಎಸೆತ ವೈಡ್‌ ಆಯಿತು. ನಂತರದ ಎಸೆತ ಕೂಡ ಲೈನ್‌ನಿಂದ ಹೊರಗಡೆ ಹೋಗುತ್ತಿತ್ತು, ಅದರಂತೆ ಅಂಪೈರ್‌ ರೀಫೆಲ್‌, ವೈಡ್‌ ನೀಡಲು ತನ್ನ ಎರಡೂ ಕೈಗಳನ್ನು ಅರ್ಧಕ್ಕೆ ಎತ್ತುವ ವೇಳೆ ಎಂಎಸ್‌ ಧೋನಿಯ ಕೋಪಗೊಂಡಿದ್ದ ಮುಖವನ್ನು ನೋಡಿ, ತಮ್ಮ ನಿರ್ಧಾರವನ್ನು ಬದಲಿಸಿದರು. ಅಂಪೈರ್‌ಗೆ ಬೆದರಿಸುವ ಎಂಎಸ್‌ ಧೋನಿಯ ನಡತೆಯನ್ನು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ತೀವ್ರವಾಗಿ ಖಂಡಿಸಿದರು. 

ಇದೀಗ ಸುನೀಲ್‌ ಗವಾಸ್ಕರ್‌, ಕೊನೆಯ ಓವರ್‌ನಲ್ಲಿ ಕರ್ಣ್‌ ಶರ್ಮಾ ಬೌಂಡರಿ ಬಿಟ್ಟುಕೊಟ್ಟ ನಂತರ ಧೋನಿ ಗಲಾಟೆ ಮಾಡಿಲ್ಲ ಆದರೆ ಸ್ವಲ್ಪ ಕಳವಳ ಹೊಂದಿದ್ದರು ಎಂದು ಗವಾಸ್ಕರ್ ಹೇಳಿದ್ದಾರೆ. ಬ್ಯಾಟ್ಸ್‌ಮನ್ ಚೆಂಡಿನ ಕಡೆಗೆ ಚಲಿಸಿದ ಸ್ಥಳದ ಬಗ್ಗೆ ಶಾರ್ದೂಲ್ ಠಾಕೂರ್ ಅವರೊಂದಿಗೆ ಅದು ಅನುಸರಿಸಿತು ಎಂದು ಅವರು ತಿಳಿಸಿದರು. ಆದಾಗ್ಯೂ, ಗವಾಸ್ಕರ್ ಕೊನೆಯ ಎರಡು ಓವರ್‌ಗಳನ್ನು ನೋಡುವುದಕ್ಕೆ ರೋಮಾಂಚನಕಾರಿ ಎಂದು ಹೇಳುವ ಮೂಲಕ ಆ ವಿಷಯವನ್ನು ನಿಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT