ಕ್ರಿಸ್ ಗೇಯ್ಲ್ ಬ್ಯಾಟಿಂಗ್ ಅಬ್ಬರ 
ಕ್ರಿಕೆಟ್

ಐಪಿಎಲ್ 2020: ಆರ್ ಸಿಬಿ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ

ಐಪಿಎಲ್ 2020 ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕಿಂಗ್ಸ್ ಎಲೆವನ್ ಪಂಜಾಬ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.

ದುಬೈ: ಐಪಿಎಲ್ 2020 ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕಿಂಗ್ಸ್ ಎಲೆವನ್ ಪಂಜಾಬ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.

ಆರ್ ಸಿಬಿ ನೀಡಿದ 172 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 177ರನ್ ಗಳಿಸುವ ಮೂಲಕ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ ಆರಂಭದಿಂದಲೂ ಉತ್ತಮ ಬ್ಯಾಟಿಂಗ್  ಮಾಡಿತು. ಆರಂಭಿಕರಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಕೇವಲ 25 ಎಸೆತಗಳಲ್ಲಿ 4 ಬೌಂಡರಿ ಹಾಗೂ 63 ಸಿಕ್ಸರ್ ಗಳ ನೆರವಿನಿಂದ 45 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಆದರೆ ಅರ್ಧ ಶತಕದ ಹೊಸ್ತಿಲಲ್ಲಿರುವಾಗಲೇ ಚಹಲ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. 

ಬಳಿಕ ಕೆಎಲ್ ರಾಹುಲ್ ಜೊತೆಗೂಡಿದ ದೈತ್ಯ ಕ್ರಿಸ್ ಗೇಯ್ಲ್ ಬೆಂಗಳೂರು ತಂಡದ ಬೌಲರ್ ಗಳ ಬೆವರಿಳಿಸಿದರು. ಅಮೋಘ 93 ರನ್ ಗಳ ಜೊತೆಯಾಟವಾಡಿದ ಈಜೋಡಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ನಿಲ್ಲಿಸಿತು. ಕೆಎಲ್ ರಾಹುಲ್ 49 ಎಸೆತಗಳಲ್ಲಿ ಅಜೇಯ 61 ಗಳಿಸಿ ತಂಡದ ಗೆಲುವಿನಲ್ಲಿ ಮಹತ್ತರ  ಪಾತ್ರವಹಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಕ್ರಿಸ್ ಗೇಯ್ಲ್ 45 ಎಸೆತಗಳಲ್ಲಿ 53 ರನ್ ಗಳಿಸಿದರು. ಅಂತಿಮ ಓವರ್ ನಲ್ಲಿ ಗೆಲುವಿನ ಹೊಸ್ತಿಲಲ್ಲಿದ್ದಾಗ ಗೇಯ್ಲ್ ರನೌಟ್ ಆದರು. ಅಂತಿಮ ಎಸೆತಕ್ಕೆ ಕ್ರೀಸ್ ಗೆ ಬಂದ ನಿಕೋಲಸ್ ಪೂರನ್ ತಾವೆದುರಿಸಿದ ಮೊದಲ ಮತ್ತು ಇನ್ನಿಂಗ್ಸ್ ನ ಕೊನೆಯ ಎಸೆತವನ್ನು  ಸಿಕ್ಸರ್ ಗೆ ಅಟ್ಟುವ ಮೂಲಕ ತಂಡಕ್ಕೆ ಭರ್ಜರಿ ಜಯ ತಂದುಕೊಂಟ್ಟರು. ಆ ಮೂಲಕ ಪಂಜಾಬ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಬೆಂಗಳೂರು ತಂಡವನ್ನು ಮಣಿಸಿತು.

ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ನಾಯಕ ವಿರಾಟ್ ಕೊಹ್ಲಿ (48 ರನ್), ಆ್ಯರೋನ್ ಫಿಂಚ್ (20 ರನ್), ಶಿವಂ ದುಬೆ (23 ರನ್), ಕ್ರಿಸ್ ಮೋರಿಸ್ (ಅಜೇಯ 25 ರನ್) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT