ಬ್ರಾವೋ-ಧೋನಿ 
ಕ್ರಿಕೆಟ್

ಸೋಲಿನ ನಂತರ ಸೂಪರ್‌ ಕಿಂಗ್ಸ್‌ಗೆ ಮತ್ತೊಂದು ಬರೆ, ಗಾಯಾಳು ಬ್ರಾವೋ 2 ವಾರಗಳ ಕಾಲ ಔಟ್!

ಗೆಲುವಿನ ಫಾರ್ಮುಲಾ ಕಂಡುಕೊಳ್ಳುವುದರಲ್ಲಿದ್ದ ಮೂರು ಬಾರಿಯ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಶನಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರು ಅಚ್ಚರಿಯ ಸೋಲನುಭವಿಸಿತು.

ಶಾರ್ಜಾ: ಗೆಲುವಿನ ಫಾರ್ಮುಲಾ ಕಂಡುಕೊಳ್ಳುವುದರಲ್ಲಿದ್ದ ಮೂರು ಬಾರಿಯ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಶನಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರು ಅಚ್ಚರಿಯ ಸೋಲನುಭವಿಸಿತು.

ಪಂದ್ಯದ ಕೊನೆ ಓವರ್‌ನಲ್ಲಿ ಡೆಲ್ಲಿ ಗೆಲುವಿಗೆ 17 ರನ್‌ಗಳ ಅಗತ್ಯವಿತ್ತು. ಇಲ್ಲಿ ಸಿಎಸ್‌ಕೆ ತಂಡಕ್ಕೆ ಪರಿಣತ ಬೌಲರ್‌ ಹಾಗೂ ಡೆತ್‌ ಓವರ್‌ ಸ್ಪೆಷಲಿಸ್ಟ್‌ ಡ್ವೇನ್‌ ಬ್ರಾವೋ ಅವರ ಸೇವೆ ಲಭ್ಯವಾಗದೇ ಹೋದದ್ದು ಧೋನಿ ಪಡೆಯ ಸೋಲಿಗೆ ಮುಖ್ಯ ಕಾರಣವಾಯಿತು.

ಅಂದಹಾಗೆ ಇನಿಂಗ್ಸ್‌ ಮಧ್ಯದಲ್ಲಿ ತೊಡೆ ಸಂಧು ನೋವಿನ ಸಮಸ್ಯೆಗೆ ತುತ್ತಾದ ಡ್ವೇನ್‌ ಬ್ರಾವೋ ಮರಳಿ ಫೀಲ್ಡ್‌ಗೆ ಇಳಿಯದೇ ಇದ್ದ ಕಾರಣ ಧೋನಿಗೆ ಅನಿವಾರ್ಯವಾಗಿ ರವೀಂದ್ರ ಚಡೇಜಾ ಅವರಿಂದ ಕೊನೆಯ ಓವರ್‌ ಬೌಲಿಂಗ್‌ ಮಾಡಿಸುವಂತಾಯಿತು. ಅಂತಿಮವಾಗಿ ಜಡೇಜಾ ಎದುರು ಡೆಲ್ಲಿ ಬ್ಯಾಟ್ಸ್‌ಮನ್‌ ಅಕ್ಷರ್‌ ಪಟೇಲ್‌ ಮೂರು ಸಿಕ್ಸರ್‌ ಸಿಡಿಸಿ ಕ್ಯಾಪಿಟಲ್ಸ್‌ಗೆ ಗೆಲುವಿನ ಮಾಲೆ ತೊಡಿಸಿದರು.

ಈ ಅಚ್ಚರಿಯ ಸೋಲಿನ ಬೆನ್ನಲ್ಲೇ ಸಿಎಸ್‌ಕೆ ತಂಡಕ್ಕೆ ಆಘಾತಕಾರಿ ಸುದ್ದಿಯೊಂದು ಎದುರಾಗಿದ್ದು, ಗಾಯಾಳು ಡ್ವೇನ್‌ ಬ್ರಾವೋ ಮುಂದಿನ ಒಂದೆರಡು ವಾರ ತಂಡದ ಸೇವೆಗೆ ಲಭ್ಯರಾಗುವುದು ಅನುಮಾನ ಎಂದು ಸಿಎಸ್‌ಕೆ ಮುಖ್ಯ ಕೋಚ್‌ ಸ್ಟೀಫನ್‌ ಫ್ಲೆಮಿಂಗ್‌ ಮಾಹಿತಿ ನೀಡಿದ್ದಾರೆ.

"ಬ್ರಾವೋ ಬಲ ತೊಡೆಯ ಸಂಧು ನೋವಿನ ಸಮಸ್ಯೆಗೆ ತುತ್ತಾಗಿದ್ದಾರೆ. ಗಾಯದ ಸಮಸ್ಯೆ ಗಂಭೀರವಾಗಿದ್ದ ಕಾರಣಕ್ಕೆ ಅವರನ್ನು ಪಂದ್ಯದಲ್ಲಿ ಮುಂದುವರಿಯಲು ಬಿಡಲಿಲ್ಲ. ಫೈನಲ್‌ ಓವರ್‌ ಬೌಲಿಂಗ್‌ ಮಾಡಲು ಸಾಧ್ಯವಾಗದೇ ಇರುವುದಕ್ಕೆ ಬ್ರಾವೋ ಬಹಳ ಬೇಸರದಲ್ಲಿದ್ದಾರೆ. ಡೆತ್ ಓವರ್‌ಗಳ ಬೌಲಿಂಗ್‌ ಸಲುವಾಗಿಯೇ ಬ್ರಾವೋ ತಂಡದಲ್ಲಿ ಇರುವುದು. ದುರದೃಷ್ಟ ವಶಾತ್‌ ಅವರಿಂದ ಈ ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗಲಿಲ್ಲ ಎಂದು ಫ್ಲೆಮಿಂಗ್ ಪಂದ್ಯದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT