ಮುತ್ತಯ್ಯ ಮುರಳಿಧರನ್-ವಿಜಯ್ ಸೇತುಪತಿ 
ಕ್ರಿಕೆಟ್

'800' ಬಯೋಪಿಕ್ ನಿಂದ ದಯವಿಟ್ಟು ಹೊರ ನಡೆಯಿರಿ: ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ!

ಕ್ರಿಕೆಟ್ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರ ಜೀವನಾಧಾರಿತ 800 ಚಿತ್ರದಿಂದ ಹೊರ ನಡೆಯುವಂತೆ ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ ಮಾಡಿದ್ದಾರೆ.

ಚೆನ್ನೈ: ಕ್ರಿಕೆಟ್ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರ ಜೀವನಾಧಾರಿತ 800 ಚಿತ್ರದಿಂದ ಹೊರ ನಡೆಯುವಂತೆ ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ ಮಾಡಿದ್ದಾರೆ. 

ಬಯೋಪಿಕ್ 800 ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದ್ದಂತೆ ತಮಿಳುನಾಡಿನಲ್ಲಿ ವಿಜಯ್ ಸೇತುಪತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಯಿತು. ಹೀಗಾಗಿ ಚಿತ್ರದಿಂದ ಹೊರನಡೆಯುವಂತೆ ಮುತ್ತಯ್ಯ ಮುರಳಿಧರನ್ ಅವರು ವಿಜಯ್ ಸೇತುಪತಿಗೆ ಮನವಿ ಮಾಡಿದ್ದಾರೆ. 

ಮುತ್ತಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಎಂಎಸ್ ಶ್ರೀಪತಿ ನಿರ್ದೇಶನದ 800 ಸಿನಿಮಾದ ಕುರಿತಾಗಿ ತಮಿಳುನಾಡಿನಲ್ಲಿ ಸಾಕಷ್ಟು ವಿವಾದಗಳು ಉಂಟಾಗಿವೆ. ಇದರಿಂದ ವಿಜಯ್ ಸೇತುಪತಿ ಕೂಡ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ತಮಿಳಿನ ಅದ್ಭುತ ನಟರಲ್ಲಿ ಒಬ್ಬರಾದ ವಿಜಯ್ ಸೇತುಪತಿ ವಿವಾದಕ್ಕೆ ಸಿಲುಕಿರುವುದು ನನಗೆ ಇಷ್ಟವಿಲ್ಲ. ಇದರಿಂದ ವಿಜಯ್ ಅವರ ಮುಂದಿನ ಚಿತ್ರಗಳಿಗೆ ತೊಂದರೆಯಾಗಬಹುದು. ಆ ಭಯದಿಂದಲೇ ನಾನು ಈ ಚಿತ್ರದಿಂದ ಹೊರ ನಡೆಯುವಂತೆ ಅವರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. 

ಮುರಳಿಧರನ್ ಅವರ ಟ್ವೀಟ್ ಅನ್ನು ಶೇರ್ ಮಾಡಿರುವ ವಿಜಯ್ ಸೇತುಪತಿ ಅವರು ಥ್ಯಾಂಕ್ ಯು ಅಂಡ್ ಗುಡ್ ಬೈ ಎಂದು ಬರೆದುಕೊಂಡಿರುವುದು ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಇನ್ನು ಸೇತುಪತಿ ಅವರು ಈ ಚಿತ್ರದಿಂದ ಹಿಂದೆ ಸರಿಯುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT