ಮುತ್ತಯ್ಯ ಮುರಳಿಧರನ್-ವಿಜಯ್ ಸೇತುಪತಿ 
ಕ್ರಿಕೆಟ್

'800' ಬಯೋಪಿಕ್ ನಿಂದ ದಯವಿಟ್ಟು ಹೊರ ನಡೆಯಿರಿ: ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ!

ಕ್ರಿಕೆಟ್ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರ ಜೀವನಾಧಾರಿತ 800 ಚಿತ್ರದಿಂದ ಹೊರ ನಡೆಯುವಂತೆ ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ ಮಾಡಿದ್ದಾರೆ.

ಚೆನ್ನೈ: ಕ್ರಿಕೆಟ್ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರ ಜೀವನಾಧಾರಿತ 800 ಚಿತ್ರದಿಂದ ಹೊರ ನಡೆಯುವಂತೆ ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ ಮಾಡಿದ್ದಾರೆ. 

ಬಯೋಪಿಕ್ 800 ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದ್ದಂತೆ ತಮಿಳುನಾಡಿನಲ್ಲಿ ವಿಜಯ್ ಸೇತುಪತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಯಿತು. ಹೀಗಾಗಿ ಚಿತ್ರದಿಂದ ಹೊರನಡೆಯುವಂತೆ ಮುತ್ತಯ್ಯ ಮುರಳಿಧರನ್ ಅವರು ವಿಜಯ್ ಸೇತುಪತಿಗೆ ಮನವಿ ಮಾಡಿದ್ದಾರೆ. 

ಮುತ್ತಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಎಂಎಸ್ ಶ್ರೀಪತಿ ನಿರ್ದೇಶನದ 800 ಸಿನಿಮಾದ ಕುರಿತಾಗಿ ತಮಿಳುನಾಡಿನಲ್ಲಿ ಸಾಕಷ್ಟು ವಿವಾದಗಳು ಉಂಟಾಗಿವೆ. ಇದರಿಂದ ವಿಜಯ್ ಸೇತುಪತಿ ಕೂಡ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ತಮಿಳಿನ ಅದ್ಭುತ ನಟರಲ್ಲಿ ಒಬ್ಬರಾದ ವಿಜಯ್ ಸೇತುಪತಿ ವಿವಾದಕ್ಕೆ ಸಿಲುಕಿರುವುದು ನನಗೆ ಇಷ್ಟವಿಲ್ಲ. ಇದರಿಂದ ವಿಜಯ್ ಅವರ ಮುಂದಿನ ಚಿತ್ರಗಳಿಗೆ ತೊಂದರೆಯಾಗಬಹುದು. ಆ ಭಯದಿಂದಲೇ ನಾನು ಈ ಚಿತ್ರದಿಂದ ಹೊರ ನಡೆಯುವಂತೆ ಅವರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. 

ಮುರಳಿಧರನ್ ಅವರ ಟ್ವೀಟ್ ಅನ್ನು ಶೇರ್ ಮಾಡಿರುವ ವಿಜಯ್ ಸೇತುಪತಿ ಅವರು ಥ್ಯಾಂಕ್ ಯು ಅಂಡ್ ಗುಡ್ ಬೈ ಎಂದು ಬರೆದುಕೊಂಡಿರುವುದು ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಇನ್ನು ಸೇತುಪತಿ ಅವರು ಈ ಚಿತ್ರದಿಂದ ಹಿಂದೆ ಸರಿಯುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT