ಶ್ರೀಕಾಂತ್ 
ಕ್ರಿಕೆಟ್

ಆಸ್ಟ್ರೇಲಿಯಾ ಪ್ರವಾಸಕ್ಕೆ ಕೆಎಲ್ ರಾಹುಲ್ ಆಯ್ಕೆ ಪ್ರಶ್ನಿಸಿದ್ದ ಸಂಜಯ್ ಮಂಜ್ರೇಕರ್ ಗೆ ಶ್ರೀಕಾಂತ್ ತಿರುಗೇಟು

ಆಸ್ಟ್ರೇಲಿಯಾದ ವಿರುದ್ಧದ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಆಯ್ಕೆಯನ್ನು ಪ್ರಶ್ನಿಸಿದ್ದ ಮಾಜಿ ಕ್ರಿಕೆಟಿಗ ಹಾಗೂ ಕಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಮಾಜಿ ಕ್ರಿಕೆಟಿಗ ಶ್ರೀಕಾಂತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಆಸ್ಟ್ರೇಲಿಯಾದ ವಿರುದ್ಧದ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಆಯ್ಕೆಯನ್ನು ಪ್ರಶ್ನಿಸಿದ್ದ ಮಾಜಿ ಕ್ರಿಕೆಟಿಗ ಹಾಗೂ ಕಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಮಾಜಿ ಕ್ರಿಕೆಟಿಗ ಶ್ರೀಕಾಂತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ 

ಐಪಿಎಲ್ ನಲ್ಲಿ ಆಡುತ್ತಿರುವ ಕೆಎಲ್ ರಾಹುಲ್ ನ್ನು ಡಿಸೆಂಬರ್-ಜನವರಿ ತಿಂಗಳಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಡಲು ಕೆಎಲ್ ರಾಹುಲ್ ನ್ನು ಆಯ್ಕೆ ಮಾಡಲಾಗಿದೆ. 

ಆದರೆ ಐಪಿಎಲ್ ಪ್ರದರ್ಶನದ ಆಧಾರದಲ್ಲಿ ಟೆಸ್ಟ್ ಪಂದ್ಯಕ್ಕೆ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿರುವುದು ಕೆಟ್ಟ ಪದ್ಧತಿಗೆ ನಾಂದಿ ಹಾಡಿದಂತೆ ಎಂದು ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದರು. 

ಇದಕ್ಕೆ ಮಾಜಿ ಕ್ರಿಕೆಟಿಗ ಶ್ರೀಕಾಂತ್ ತಮ್ಮ ಚೀಕಿ ಚೀಕಾ ಎಂಬ ಯೂಟ್ಯೂಬ್ ಚಾನಲ್ ನ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಪ್ರಶ್ನೆ ಮಾಡುವುದು ಮಂಜ್ರೇಕರ್ ಅವರ ಕೆಲಸ, ಆದ್ದರಿಂದ ಅವರನ್ನು ಏಕಾಂಗಿಯಾಗಿ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಟೆಸ್ಟ್ ಸರಣೆಗೆ ಕೆಎಲ್ ರಾಹುಲ್ ಆಯ್ಕೆಯನ್ನು ಪ್ರಶ್ನಿಸುವುದು ಸರಿಯಲ್ಲ. ಟೆಸ್ಟ್ ಗಳಲ್ಲಿಯೂ ಕೆಎಲ್ ರಾಹುಲ್ ಉತ್ತಮವಾಗಿ ಆಡಿದ್ದಾರೆ. ನಾನು ಮಂಜ್ರೇಕರ್ ಮಾತನ್ನು ಒಪ್ಪುವುದಿಲ್ಲ. ಕೇವಲ ವಿವಾದ ಸೃಷ್ಟಿ ಮಾಡುವುದಕ್ಕಾಗಿ ಪ್ರಶ್ನೆಗಳನ್ನು ಕೇಳಬಾರದು, ಕೆಎಲ್ ರಾಹುಲ್ ಎಲ್ಲಾ ಫಾರ್ಮಾಟ್ ಗಳಲ್ಲೂ ಅತ್ಯುತ್ತಮವಾಗಿ ಆಡಿದ್ದಾರೆ, ಅವರ ಟೆಸ್ಟ್ ದಾಖಲೆಗಳನ್ನು ಪರಿಶೀಲಿಸಿ ಎಂದು ಶ್ರೀಕಾಂತ್ ಹೇಳಿದ್ದಾರೆ.

ಮುಂಬೈ ಕ್ರಿಕೆಟರ್ ಗಳ ಮೇಲೆಯಷ್ಟೇ ಅಲ್ಲದೇ ದೇಶದ ಬೇರೆ ಭಾಗಗಳಿಂದ ಬರುವ ಕ್ರಿಕೆಟರ್ ಗಳ ಬಗ್ಗೆಯೂ ಗಮನಹರಿಸಿ ಎಂದು, ಮುಂಬೈ ನ ಹೊರತಾಗಿಯೂ ಯೋಚನೆ ಮಾಡಿ ಎಂದು ಸಂಜಯ್ ಮಂಜ್ರೇಕರ್ ಗೆ ಶ್ರೀಕಾಂತ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT