ವಿರೇಂದ್ರ ಸೆಹ್ವಾಗ್ 
ಕ್ರಿಕೆಟ್

ಐಪಿಎಲ್-2020: ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಅಂಪೈರ್ ಗೆ ಕೊಟ್ಬಿಡಿ ಅಂದಿದ್ದೇಕೆ ವಿರೇಂದ್ರ ಸೆಹ್ವಾಗ್?

ಐಪಿಎಲ್-2020 ಟೂರ್ನಿಯ ಸೆ.21 ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಿಂಗ್ಸ್ XI ಪಂಜಾಬ್ ತಂಡವನ್ನು ಮಣಿಸಿದ್ದು, ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದೆ. 

ಐಪಿಎಲ್-2020 ಟೂರ್ನಿಯ ಸೆ.21 ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ಕಿಂಗ್ಸ್ XI ಪಂಜಾಬ್ ತಂಡವನ್ನು ಮಣಿಸಿದ್ದು, ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದೆ. 

ಸೂಪರ್ ಓವರ್ ನಲ್ಲಿ ದೆಹಲಿ ತಂಡ ಗೆಲ್ಲುವುದಕ್ಕೂ ಮುನ್ನ ಕಿಂಗ್ಸ್ XI ಪಂಜಾಬ್ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ ಸಮಬಲ ಸಾಧಿಸಿತ್ತು. ಈ ಬಳಿಕವಷ್ಟೇ ಸೂಪರ್ ಓವರ್ ನಡೆಯಿತು.

ಇದಕ್ಕೂ ಮುನ್ನ ಕೇವಲ ಒಂದು ರನ್ ನಿಂದಾಗಿ ಪಂದ್ಯ ಸಮಬಲ ಸಾಧಿಸಿತ್ತು. ಕಿಂಗ್ಸ್ XI ಪಂಜಾಬ್ ನ ಆಟಗಾರ ಕ್ರಿಸ್ ಜೋರ್ಡಾನ್ ಅವರ ರನ್ ಔಟ್ ವಿಷಯದಲ್ಲಿ ಬಹುದೊಡ್ಡ ಪ್ರಮಾದ ನಡೆದಿತ್ತು. ಬ್ಯಾಟ್ ಕ್ರೀಸ್ ನಲ್ಲಿದ್ದರೂ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು ಪರಿಣಾಮ ಪಂದ್ಯದ ದಿಕ್ಕೇ ಬದಲಾಯಿತು. ಕಿಂಗ್ಸ್ XI ಪಂಜಾಬ್ ನ ಸೋಲಿನ ಬೆನ್ನಲ್ಲೆ ಸೆಹ್ವಾಗ್ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಅಂಪೈರ್ ನ್ನು ಟೀಕಿಸಿದ್ದಾರೆ. 

ಈ ಪಂದ್ಯದಲ್ಲಿ ಪಂದ್ಯಪುರುಷೋತ್ತಮ ಪ್ರಶಸ್ತಿ ಆಯ್ಕೆಯನ್ನು ನಾನು ಒಪ್ಪುವುದಿಲ್ಲ. ಮ್ಯಾನ್ ಆಫ್ ದಿ ಮ್ಯಾಚ್ ನೀಡಬೇಕಾದ್ದು ತಪ್ಪು ತೀರ್ಪು ನೀಡಿದ್ದ ಅಂಪೈರ್ ಗೆ ಎಂದು ಸೆಹ್ವಾಗ್ ವ್ಯಂಗ್ಯವಾಗಿ ಟ್ವೀಟ್ ಮಾಡಿ ಅಂಪೈರ್ ನ ತಪ್ಪು ನಿರ್ಧಾರವನ್ನು ಟೀಕಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT