ವಿರೇಂದ್ರ ಸೆಹ್ವಾಗ್ 
ಕ್ರಿಕೆಟ್

ಐಪಿಎಲ್-2020: ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಅಂಪೈರ್ ಗೆ ಕೊಟ್ಬಿಡಿ ಅಂದಿದ್ದೇಕೆ ವಿರೇಂದ್ರ ಸೆಹ್ವಾಗ್?

ಐಪಿಎಲ್-2020 ಟೂರ್ನಿಯ ಸೆ.21 ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಿಂಗ್ಸ್ XI ಪಂಜಾಬ್ ತಂಡವನ್ನು ಮಣಿಸಿದ್ದು, ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದೆ. 

ಐಪಿಎಲ್-2020 ಟೂರ್ನಿಯ ಸೆ.21 ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ಕಿಂಗ್ಸ್ XI ಪಂಜಾಬ್ ತಂಡವನ್ನು ಮಣಿಸಿದ್ದು, ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದೆ. 

ಸೂಪರ್ ಓವರ್ ನಲ್ಲಿ ದೆಹಲಿ ತಂಡ ಗೆಲ್ಲುವುದಕ್ಕೂ ಮುನ್ನ ಕಿಂಗ್ಸ್ XI ಪಂಜಾಬ್ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ ಸಮಬಲ ಸಾಧಿಸಿತ್ತು. ಈ ಬಳಿಕವಷ್ಟೇ ಸೂಪರ್ ಓವರ್ ನಡೆಯಿತು.

ಇದಕ್ಕೂ ಮುನ್ನ ಕೇವಲ ಒಂದು ರನ್ ನಿಂದಾಗಿ ಪಂದ್ಯ ಸಮಬಲ ಸಾಧಿಸಿತ್ತು. ಕಿಂಗ್ಸ್ XI ಪಂಜಾಬ್ ನ ಆಟಗಾರ ಕ್ರಿಸ್ ಜೋರ್ಡಾನ್ ಅವರ ರನ್ ಔಟ್ ವಿಷಯದಲ್ಲಿ ಬಹುದೊಡ್ಡ ಪ್ರಮಾದ ನಡೆದಿತ್ತು. ಬ್ಯಾಟ್ ಕ್ರೀಸ್ ನಲ್ಲಿದ್ದರೂ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು ಪರಿಣಾಮ ಪಂದ್ಯದ ದಿಕ್ಕೇ ಬದಲಾಯಿತು. ಕಿಂಗ್ಸ್ XI ಪಂಜಾಬ್ ನ ಸೋಲಿನ ಬೆನ್ನಲ್ಲೆ ಸೆಹ್ವಾಗ್ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಅಂಪೈರ್ ನ್ನು ಟೀಕಿಸಿದ್ದಾರೆ. 

ಈ ಪಂದ್ಯದಲ್ಲಿ ಪಂದ್ಯಪುರುಷೋತ್ತಮ ಪ್ರಶಸ್ತಿ ಆಯ್ಕೆಯನ್ನು ನಾನು ಒಪ್ಪುವುದಿಲ್ಲ. ಮ್ಯಾನ್ ಆಫ್ ದಿ ಮ್ಯಾಚ್ ನೀಡಬೇಕಾದ್ದು ತಪ್ಪು ತೀರ್ಪು ನೀಡಿದ್ದ ಅಂಪೈರ್ ಗೆ ಎಂದು ಸೆಹ್ವಾಗ್ ವ್ಯಂಗ್ಯವಾಗಿ ಟ್ವೀಟ್ ಮಾಡಿ ಅಂಪೈರ್ ನ ತಪ್ಪು ನಿರ್ಧಾರವನ್ನು ಟೀಕಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT