ಸಂಗ್ರಹ ಚಿತ್ರ 
ಕ್ರಿಕೆಟ್

ಲಂಕಾ ಕ್ರಿಕೆಟ್ ದಂತಕಥೆ ಮುರಳೀಧರನ್ ಗೆ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಯಶಸ್ವಿ

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಚೆನ್ನೈ: ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀಲಂಕಾದ ಕ್ರಿಕೆಟ್ ದಂತಕಥೆ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ತಂಡದ ಬೌಲಿಂಗ್ ಕೋಚ್ ಕೂಡ ಆಗಿರುವ ಮುತ್ತಯ್ಯ ಮುರಳೀಧರನ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ನಿನ್ನೆಯಷ್ಟೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರಿಗೆ ನುರಿತ ವೈದ್ಯರ ತಂಡ  ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಪೋಲೋ ಆಸ್ಪತ್ರೆ ವೈದ್ಯರ ತಂಡ ಇಂದು ಮುರಳೀಧರನ್ ಅವರಿಗೆ ಯಶಸ್ವಿಯಾಗಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಅಂತೆಯೇ ಅವರಿಗೆ ಸ್ಟಂಟ್ ಅಳವಡಿಸಲಾಗಿದ್ದು, ಇಂದೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾರ್ಚ್ ಕೊನೆಗೆ ಮುರಳೀಧರನ್ ಹೃದಯ ನಾಳದಲ್ಲಿ ತಡೆ (ಬ್ಲಾಕ್) ಕಾಣಿಸಿಕೊಂಡಿತ್ತು. ಆದ್ದರಿಂದ ಆಂಜಿಯೋಪ್ಲಾಸ್ಟಿ ನಡೆಸಬೇಕಾಯಿತು. ಇದೀಗ ಆರೋಗ್ಯವಾಗಿದ್ದು, ಇಂದೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?