ರವೀಂದ್ರ ಜಡೇಜ 
ಕ್ರಿಕೆಟ್

ಕೊನೆಯಲ್ಲಿ ರವೀಂದ್ರ ಜಡೇಜ ಅಬ್ಬರದ ಬ್ಯಾಟಿಂಗ್: ಆರ್ ಸಿಬಿಗೆ 192 ರನ್ ಗುರಿ ನೀಡಿದ ಸಿಎಸ್ ಕೆ

ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯಲ್ಲಿ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 192 ರನ್ ಗಳ ಗುರಿಯನ್ನು ನೀಡಿದೆ.

ಮುಂಬೈ: ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯಲ್ಲಿ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 192 ರನ್ ಗಳ ಗುರಿಯನ್ನು  ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ  191 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಸಿಎಸ್ ಕೆ ಪರ ಆರಂಭಿಕ ಫಾಫ್ ಡು ಪ್ಲಿಸಿಸ್ ಅರ್ಧಶತಕ ಬಾರಿಸಿದರೆ, ಇನ್ನಿಂಗ್ಸ್ ಅಂತ್ಯದಲ್ಲಿ  ಅಬ್ಬರದ ಬ್ಯಾಟಿಂಗ್ ನಡೆಸಿದ ಜಡೇಜ 28 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಐದು ಭರ್ಜರಿ ಸಿಕ್ಸರ್ ನೆರವಿನಿಂದ 62 ರನ್ ಗಳಿಸಿ ಅಜೇಯರಾಗಿ ಉಳಿದರು.

ಆರ್ ಸಿಬಿ ವೇಗಿ ಹರ್ಷಲ್ ಪಟೇಲ್ ಮೊದಲಿಗೆ ಮೂರು ವಿಕೆಟ್ ಕಬಳಿಸಿದರೂ ಇನ್ನಿಂಗ್ಸ್ ನ ಕೊನೆಯ ಓವರ್ ನಲ್ಲಿ 37 ರನ್ ನೀಡುವ ಮೂಲಕ ದುಬಾರೆಯೆನಿಸಿದರು. ಈ ಓವರ್ ನಲ್ಲಿ ಜಡೇಜ ಸತತ ನಾಲ್ಕು ಸೇರಿದಂತೆ ಒಟ್ಟು ಐದು ಸಿಕ್ಸರ್ ಗಳನ್ನು
ಬಾರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT