ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ(ಬಲಕ್ಕೆ) ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (ಎಡಕ್ಕೆ) 
ಕ್ರಿಕೆಟ್

ಕೊರೋನಾ ಉಲ್ಬಣ: ಸ್ವದೇಶಕ್ಕೆ ಮರಳಲು ಎಲ್ಲಾ ವ್ಯವಸ್ಥೆ ಮಾಡುತ್ತೇವೆ, ಐಪಿಎಲ್ ವಿದೇಶಿ ಆಟಗಾರರಿಗೆ ಬಿಸಿಸಿಐ ಭರವಸೆ

ಕೊರೋನಾ ಎರಡನೇ ಅಲೆ ಹಿನ್ನಲೆಯಲ್ಲಿ ಭಾರತದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಇದರ ನಡುವೆ ಐಪಿಎಲ್ ಟೂರ್ನಿ ಸಹ ನಡೆಯುತ್ತಿದೆ. ಹೀಗಾಗಿ ಐಪಿಎಲ್ ನಲ್ಲಿ ಭಾಗಿಯಾಗಿರುವ ವಿದೇಶಿ ಆಟಗಾರರಿಗೆ ಬಿಸಿಸಿಐ ಸುರಕ್ಷಿತವಾಗಿ ಸ್ವದೇಶಕ್ಕೆ ಕಳುಹಿಸುವ ಭರವಸೆ ನೀಡಿದೆ. 

ನವದೆಹಲಿ: ಕೊರೋನಾ ಎರಡನೇ ಅಲೆ ಹಿನ್ನಲೆಯಲ್ಲಿ ಭಾರತದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಇದರ ನಡುವೆ ಐಪಿಎಲ್ ಟೂರ್ನಿ ಸಹ ನಡೆಯುತ್ತಿದೆ. ಹೀಗಾಗಿ ಐಪಿಎಲ್ ನಲ್ಲಿ ಭಾಗಿಯಾಗಿರುವ ವಿದೇಶಿ ಆಟಗಾರರಿಗೆ ಬಿಸಿಸಿಐ ಸುರಕ್ಷಿತವಾಗಿ ಸ್ವದೇಶಕ್ಕೆ ಕಳುಹಿಸುವ ಭರವಸೆ ನೀಡಿದೆ.

ಅದಾಗಲೇ ಮೂವರು ವಿದೇಶಿ ಕ್ರಿಕೆಟಿಗರು ಐಪಿಎಲ್ ಗೆ ಗುಡ್ ಬೈ ಹೇಳಿ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸ್ವದೇಶಕ್ಕೆ ವಾಪಸಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಿಸಿಸಿಐ ವಿದೇಶಿ ಆಟಗಾರರಿಗೆ ಸ್ಥೈರ್ಯ ತುಂಬಿದೆ. 

ಐಪಿಎಲ್ ಟೂರ್ನಿ ಮುಕ್ತಾಯದ ಬಳಿಕ ತಮ್ಮ ತಮ್ಮ ದೇಶಕ್ಕೆ ಮರಳಲು ಆಟಗಾರರಿಗೆ ಏನೇನು ಸೌಲಭ್ಯ ನೀಡಬೇಕೋ ಅದೆಲ್ಲವನ್ನೂ ನಾವು ಒದಗಿಸುತ್ತೇನೆ. ಸ್ವದೇಶಕ್ಕೆ ಮರಳಲು ಬೇಕಾದ ವ್ಯವಸ್ಥೆ ಎಲ್ಲವನ್ನೂ ಮಾಡಿಕೊಡುತ್ತೇನೆ ಎಂದು ಬಿಸಿಸಿಐ ತಿಳಿಸಿದೆ. 

ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಬಹುತೇಕ ಕ್ರಿಕೆಟಿಗರು ಟೂರ್ನಿಯ ಮುಕ್ತಾಯದ ಬಳಿಕ ಮನೆಗೆ ಮರಳುವುದು ಹೇಗೆ ಎಂದು ಚಿಂತೆಗೀಡಾಗಿದ್ದೀರಿ ಎಂದು ತಿಳಿದಿದೆ. ಆದರೆ ಈ ಬಗ್ಗೆ ನೀವು ಆತಂಕ ಪಡುವ ಅಗತ್ಯವಿಲ್ಲ. ಸದ್ಯದ ಪರಿಸ್ಥಿತಿಯ ಬಗ್ಗೆ ಬಿಸಿಸಿಐ ಕೂಡ ಗಮನವಿರಿಸಿದೆ. ನೀವು ಸ್ವದೇಶಕ್ಕೆ ಮರಳಲು ಅಗತ್ಯ ವ್ಯವಸ್ಥೆಯನ್ನು ಸರ್ಕಾರದೊಂದಿಗೆ ವಿಚಾರ ಮಾಡಿದೆ ಎಂದು ಬಿಸಿಸಿಐ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT