ವಿರಾಟ್ ಕೊಹ್ಲಿ ವಿಕೆಟ್ ಪಡೆದು ಸಂಭ್ರಮಿಸುತ್ತಿರುವ ಇಂಗ್ಲೆಂಡ್ ತಂಡದ ಆಟಗಾರರು 
ಕ್ರಿಕೆಟ್

ಇಂಗ್ಲೆಂಡ್- ಭಾರತ ಮೊದಲ ಟೆಸ್ಟ್: ಚಹಾ ವಿರಾಮದ ವೇಳೆಗೆ ಮಳೆಯಿಂದಾಗಿ ಪಂದ್ಯ ಸ್ಥಗಿತ

ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟವಾದ ಇಂದು ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದಾಗ ಮಳೆ ಕಾರಣ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು.

ನಾಟ್ಟಿಂಗ್ ಹ್ಯಾಮ್:  ಇಲ್ಲಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟವಾದ ಇಂದು ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದಾಗ ಮಳೆ ಕಾರಣ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು.

ಭೋಜನ ವಿರಾಮದ ವೇಳೆಗೆ 97 ರನ್ ಗಳಿಗೆ 1 ವಿಕೆಟ್  ಕಳೆದುಕೊಂಡಿದ್ದ ಭಾರತ ತದನಂತರ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ರಾಹುಲ್ 57 ಮತ್ತು ಪಂತ್ 07 ರನ್ ಗಳಿಸಿದಾಗ ಮಳೆಯ ಕಾರಣದಿಂದಾಗಿ ಟೀ ವಿರಾಮದ ವೇಳೆಗೆ ಅಂಪೈರ್ ಗಳು ಪಂದ್ಯ ಸ್ಥಗಿತಗೊಳಿಸಲು ನಿರ್ಧರಿಸಿದರು.

ಇದಕ್ಕೂ ಮುನ್ನ ಭಾರತ 8.4 ಓವರ್ ಗಳಲ್ಲಿ 28 ರನ್ ಗಳಿಗೆ ಮೂರು ವಿಕೆಟ್ ಗಳನ್ನು ಕಳೆದುಕೊಂಡಿತ್ತು.  ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 183 ರನ್ ಗಳಿಗೆ ಆಲೌಟ್ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT