ಕೊಹ್ಲಿ, ಜೇಮ್ಸ್ ಆಂಡರ್ಸನ್ 
ಕ್ರಿಕೆಟ್

ಲಾರ್ಡ್ಸ್ 2ನೇ ಟೆಸ್ಟ್: ಜೇಮ್ಸ್ ಆಂಡರ್ಸನ್ ವಿರುದ್ಧ ಕೊಹ್ಲಿ ಬಳಸಿದ ಭಾಷೆಗೆ ಸ್ಟುವರ್ಟ್ ಬ್ರಾಡ್ ಪ್ರತಿಕ್ರಿಯಿಸಿದ್ದು ಹೀಗೆ!

ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಯ್ಲಿ ಹಾಗೂ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ನಡುವೆ ಮಾತಿನ ಚಕಮಕಿ ನಡೆದಿದೆ

ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಯ್ಲಿ ಹಾಗೂ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ನಡುವೆ ಮಾತಿನ ಚಕಮಕಿ ನಡೆದಿದೆ. ಲಾರ್ಡ್ಸ್ ಕ್ರಿಡಾಂಗಣ  ನಿನ್ನ ಮನೆಯ ಹಿತ್ತಲಲ್ಲ ಎಂದು ಆಂಡರ್ಸನ್ ಗೆ ಕೊಹ್ಲಿ ಹೇಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಇಂಗ್ಲೆಂಡ್ ಆಟಗಾರ  ಸ್ಟುವರ್ಟ್ ಬ್ರಾಡ್ ಕೊಹ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಾರ್ಡ್ಸ್ ಕ್ರೀಡಾಂಗಣ ನಿಜಕ್ಕೂ ಜೇಮ್ಸ್ ಆಂಡರ್ಸನ್ ಅವರ ಹಿತ್ತಲು ಆಗಿದೆ. ಬೆಂಕಿಯನ್ನು ಪ್ರೀತಿಸಿ ಆದರೆ, ಆ ಭಾಷೆಯಿಂದ ಅವರಿಗೆ ತೊಂದರೆಯಾಗುತ್ತದೆ ಎಂದು ಬ್ರಾಡ್ ಟ್ವೀಟ್ ಮಾಡಿದ್ದಾರೆ. 

ಭಾನುವಾರ ನಡೆದ ಪಂದ್ಯದ ವೇಳೆಯಲ್ಲಿ ಕೊಹ್ಲಿ 20 ರನ್ ಗಳಿಸಿದಾಗ ಸ್ಯಾಮ್ ಕ್ಯೂರಾನ್ ಗೆ ಬಲಿಯಾಗಿದ್ದರು. ಆ ಸಂದರ್ಭದಲ್ಲಿ ಭಾರತ ಮೂರು ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿತ್ತು. ತದನಂತರ ಚೇತೇಶ್ವರ ಪೂಜಾರ್ ಮತ್ತು ಅಜೆಂಕ್ಯಾ ರಹಾನೆ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 100 ರನ್ ಗಳಿಗೆ ತರುವ ಮೂಲಕ ಟೀಂ ಇಂಡಿಯಾವನ್ನು ತೊಂದರೆಯಿಂದ ಪಾರು ಮಾಡಿದರು.

ತದನಂತರ ಪೂಜಾರ 45, ರಹಾನೆ 61 ರನ್ ಗಳಿಸಿ ಔಟಾದರು. ನಂತರ ರವೀಂದ್ರಾ ಜಡೇಜಾ ಮೂರು ರನ್ ಗಳಿಸಿ ನಿರ್ಗಮಿಸಿದರು.  ಟೀಂ ಇಂಡಿಯಾ ನಾಲ್ಕು ವಿಕೆಟ್ ಗಳೊಂದಿಗೆ 154 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT