ಬಿಸಿಸಿಐ ಲೋಗೋ 
ಕ್ರಿಕೆಟ್

ಓಮಿಕ್ರಾನ್ ಭೀತಿ ನಡುವೆಯೇ ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ; ಡಿ.26ರಂದು ಮೊದಲ ಟೆಸ್ಟ್!

ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್‌ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ.

ನವದೆಹಲಿ: ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್‌ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ.

ಆಫ್ರಿಕಾದಲ್ಲಿ ಓಮಿಕ್ರಾನ್ ರೂಪಾಂತರ ಸೋಂಕು ಉಲ್ಬಣವಾದ ಹಿನ್ನಲೆಯಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಅನುಮಾನಗಳು ಮೂಡಿದ್ದವು. ಆದರೆ ಇದೀಗ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದ್ದು, ಪ್ರವಾಸ ಮುಂದುವರೆಯಲಿದೆ ಎಂದು ಹೇಳಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು, 'ಭಾರತ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ಭಾಗವಾಗಿದ್ದ ನಾಲ್ಕು ಟಿ20 ಪಂದ್ಯಗಳನ್ನು ನಂತರ ಆಡಲಾಗುತ್ತದೆ ಎಂದು ಶನಿವಾರ ಪ್ರಕಟಿಸಿದ್ದಾರೆ.

ಈ ಕುರಿತು ಉಭಯ ಕ್ರಿಕೆಟ್ ಮಂಡಳಿಗಳು ಸುಧೀರ್ಘ ಚರ್ಚೆ ನಡೆಸಿ ಒಂದು ಒಪ್ಪಂದಕ್ಕೆ ಬಂದಿದ್ದು, ಅದರಂತೆ 'ಭಾರತ ತಂಡವು ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಂದು ಆರಂಭವಾಗಲಿದೆ. ಅಂತೆಯೇ ಉಭಯ ಕ್ರಿಕೆಟ್ ಬೋರ್ಡ್‌ಗಳು ನಾಲ್ಕು ಟ್ವೆಂಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ನಂತರದ ದಿನಾಂಕದಲ್ಲಿ ಆಡಲಾಗುವುದು ಎಂದು ನಿರ್ಧರಿಸಿವೆ. 

ಆದರೆ ಸರಣಿಯ ಸ್ಥಳಗಳನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಆದರೆ ಬಾಕ್ಸಿಂಗ್ ಡೇ ಟೆಸ್ಟ್ ಅನ್ನು ಈ ಹಿಂದೆ ಆಯೋಜಿಸಲಾಗಿದ್ದ ಡರ್ಬನ್‌ ಕ್ರೀಡಾಂಗಣದಲ್ಲಿ ಅಲ್ಲದೆ ಸೆಂಚುರಿಯನ್‌ನಲ್ಲಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ತವರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಪಂದ್ಯದ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡಗಳ ಪಂದ್ಯ ನಿಗದಿಯಾಗಿದೆ. ಪ್ರವಾಸದಲ್ಲಿ ಭಾರತ ತಂಡ 3 ಟೆಸ್ಟ್, 3 ಏಕದಿನ ಹಾಗೂ 4 ಟಿ20 ಸರಣಿಗಳ ವೇಳಾಪಟ್ಟಿ ಈಗಾಗಲೇ ನಿಗದಿಯಾಗಿತ್ತು. ಆದರೆ 4 ಟಿ20 ಪಂದ್ಯಗಳನ್ನು ಮುಂದೂಡಿದ್ದಾರೆ. ಡಿ.17ರಿಂದ ಜೊಹಾನ್ಸ್ ಬರ್ಗ್‍ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT