ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಇಂಥವರಿಂದಲೇ ಜಗತ್ತು ಸುಂದರವಾಗಿದೆ: ಫ್ರೆಂಡ್ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್ ಗೆ ಸಚಿನ್ ಭಾವನಾತ್ಮಕ ಸಂದೇಶ

ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಸಹೃದಯತೆಯನ್ನು ಪ್ರದರ್ಶಿಸಿದ್ದಾರೆ. ರಸ್ತೆ ಅಪಘಾತಕ್ಕೀಡಾದ ತನ್ನ ಸ್ನೇಹಿತೆಯನ್ನು ರಕ್ಷಿಸಿದ ಸಂಚಾರಿ ಪೊಲೀಸರನ್ನು ಖುದ್ದಾಗಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

ಮುಂಬೈ: ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಸಹೃದಯತೆಯನ್ನು ಪ್ರದರ್ಶಿಸಿದ್ದಾರೆ. ರಸ್ತೆ ಅಪಘಾತಕ್ಕೀಡಾದ ತನ್ನ ಸ್ನೇಹಿತೆಯನ್ನು ರಕ್ಷಿಸಿದ ಸಂಚಾರಿ ಪೊಲೀಸರನ್ನು ಖುದ್ದಾಗಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

ಇತ್ತೀಚೆಗೆ ಸಚಿನ್ ಅವರ ಸ್ನೇಹಿತೆಯೊಬ್ಬರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಸಮಯದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು ತಕ್ಷಣವೇ ಸ್ಪಂದಿಸಿ ಆಕೆಯನ್ನು ಆಟೋದಲ್ಲಿ ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು.

ಈ ಘಟನೆಯನ್ನು ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಸಚಿನ್, “ಇಂತಹ ಜನರಿಂದ ಜಗತ್ತು ಸುಂದರವಾಗಿದೆ” ಎಂದು ಹೇಳಿದ್ದಾರೆ. ಜನರ ಜೀವ ಉಳಿಸಲು ದೇಶಾದ್ಯಂತ ಟ್ರಾಫಿಕ್ ಪೊಲೀಸರು ಶ್ರಮಿಸುತ್ತಿದ್ದಾರೆ . ಅವರಿಗೆ ಅಭಿನಂದನೆಗಳು. ನಾವೆಲ್ಲರೂ ಸಂಚಾರ ನಿಯಮಗಳನ್ನು ಪಾಲಿಸೋಣ ಎಂದು ಸಚಿನ್‌ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT