ಹರ್ಭಜನ್ ಸಿಂಗ್ 
ಕ್ರಿಕೆಟ್

700 ವಿಕೆಟ್ ಪಡೆದರೂ ಏಕೆ ಕೈಬಿಡಲಾಯಿತು; ಇದಕ್ಕೆ ಇಂದಿಗೂ ನನ್ನ ಬಳಿ ಉತ್ತರವಿಲ್ಲ': ಕರಾಳ ಸತ್ಯ ಬಿಚ್ಚಿಟ್ಟ ಹರ್ಭಜನ್ ಸಿಂಗ್

ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ 23 ವರ್ಷಗಳ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದು ಇದೀಗ ಟೀಂ ಇಂಡಿಯಾದ ದುಖಃದ ಕಥೆಯನ್ನು ಬಿಚ್ಚಿಟ್ಟಿದ್ದಾರೆ. 

ನವದೆಹಲಿ: ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ 23 ವರ್ಷಗಳ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದು ಇದೀಗ ಟೀಂ ಇಂಡಿಯಾದ ದುಖಃದ ಕಥೆಯನ್ನು ಬಿಚ್ಚಿಟ್ಟಿದ್ದಾರೆ. 

ಟೆಸ್ಟ್ 400 ವಿಕೆಟ್ ಪಡೆದಿರುವ ಓರ್ವ ಆಟಗಾರನನ್ನು ತಂಡದಿಂದ ದಿಢೀರ್ ಅಂತ ತೆಗೆದುಹಾಕುತ್ತಾರೆ. ಹೀಗೆ ಸ್ಥಾನ ಕಳೆದುಕೊಂಡ ಆ ಆಟಗಾರನಿಗೆ ಮತ್ತೆ ಅವಕಾಶ ಸಿಗುವುದಿಲ್ಲ ಹಾಗೂ ತಂಡದಿಂದ ಯಾಕೆ ತೆಗೆದುಹಾಕಲಾಯಿತು ಎಂಬುದಕ್ಕೆ ಉತ್ತರವನ್ನು ಕೂಡ ಸಿಗುವುದಿಲ್ಲ. ಅಲ್ಲದೆ ಈ ಕುರಿತು ನಾನು ಅನೇಕರ ಬಳಿ ಕಾರಣವನ್ನು ಕೇಳಿದೆ ಆದರೆ ಯಾರೂ ಕೂಡ ನನಗೆ ಪ್ರತ್ಯುತ್ತರವನ್ನು ನೀಡಲೇ ಇಲ್ಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. 

ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಕೂಡ ತಮ್ಮನ್ನು ತಂಡದಿಂದ ಕೈ ಬಿಟ್ಟರು. ಅದಕ್ಕೆ ನಿರ್ದಿಷ್ಠ ಕಾರಣವನ್ನು ಯಾರೂ ನೀಡಲಿಲ್ಲ ಎಂದು ತಮಗಾದ ಅವಮಾನ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. 2016ರ ನಂತರ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡುವ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಹರ್ಭಜನ್ ಸಿಂಗ್ ವಿಫಲರಾಗಿದ್ದರು. ಅವಕಾಶ ಸಿಗದ್ದಕ್ಕೆ ಬೇಸರ ವಕ್ತಪಡಿಸಿರುವ ಅವರು ತನಗೆ ಮತ್ತೆ ಅವಕಾಶಗಳನ್ನು ನೀಡಿದ್ದರೆ ನಿವೃತ್ತಿ ಸಮಯಕ್ಕೆ 500ರಿಂದ 550 ಟೆಸ್ಟ್ ವಿಕೆಟ್ ಗಳನ್ನು ಪಡೆದಿರುತ್ತಿದ್ದೆ ಎಂದು ಹೇಳಿದ್ದಾರೆ.

ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ. ಕುಂಬ್ಳೆ ಒಟ್ಟಾರೆ 953 ವಿಕೆಟ್ ಪಡೆದಿದ್ದರೆ 707 ವಿಕೆಟ್ ಪಡೆದುಕೊಂಡಿರುವ ಹರ್ಭಜನ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT