ನೀರಿನಿಂದ ಒದ್ದೆಯಾಗಿರುವ ಸೆಂಚುರಿಯನ್ ಮೈದಾನ 
ಕ್ರಿಕೆಟ್

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಎರಡನೇ ದಿನದಾಟಕ್ಕೆ ಮಳೆ ಅಡ್ಡಿ

ಸೋಮವಾರ ಬೆಳಗ್ಗೆಯಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟ ರದ್ದಾಗಿದೆ. 

ಸೆಂಚುರಿಯನ್: ಸೋಮವಾರ ಬೆಳಗ್ಗೆಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟ ರದ್ದಾಗಿದೆ. 

ಬೆಳಗ್ಗೆಯಿಂದಲೇ ಸಣ್ಣದಾಗಿ ಆರಂಭವಾದ ಮಳೆ ಮಧ್ಯಾಹ್ನದ ವೇಳೆಗೆ ಭಾರೀ ಮಳೆಯಾಯಿತು. ಮೊದಲ ದಿನದಾಟದ ಅಂತ್ಯಕ್ಕೆ ಭಾರತ ತಂಡ 90 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತ್ತು. ಉಳಿದಿರುವ ಮೂರು ದಿನಗಳಲ್ಲಿ ಸಾಧ್ಯವಾದಷ್ಟು ಹೆಚ್ಚಿನ ರನ್ ಗಳಿಸುವ ಮೂಲಕ ಪಂದ್ಯ ಗೆಲ್ಲಲು ಭಾರತ ಎದುರು ನೋಡುತ್ತಿದೆ. 

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್: ರಾಹುಲ್ ಶತಕದ ನೆರವಿನಿಂದ ಭಾರತ ಮೇಲುಗೈ
ಎರಡು ಬಾರಿ ಮಳೆ ನಿಂತಿತ್ತು. ಆದರೆ ಮೈದಾನ ಪರಿಶೀಲಿಸಿದ ಅಂಪೈರ್ ಗಳು ದಿನದಾಟ ಸ್ಥಗಿತಗೊಳಿಸುವ ಘೋಷಣೆ ಮಾಡಿದರು. ಸೆಂಚುರಿಯನ್ ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ದುರಾದೃಷ್ಟವಶಾತ್ ಎರಡನೇ ದಿನದಾಟವನ್ನು ಅಂತ್ಯಗೊಳಿಸಲಾಗಿದೆ ಎಂದು ಮೈದಾನದ ಚಿತ್ರದೊಂದಿಗೆ ಬಿಸಿಸಿಐ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹೇಳಿದೆ. 

ಮೈದಾನದ ಪಿಚ್ ಮೇಲಿನ ಹೊದಿಕೆ ಮೇಲೂ ಭಾರೀ ಪ್ರಮಾಣದ ನೀರು ನಿಂತಿದೆ. ಅಲ್ಲದೇ ಬೆಳಕಿನ ಕೊರತೆಯಿಂದಾಗಿ ಮೈದಾನ ಒಣಗುವ ಸಾಧ್ಯತೆ ತೀರಾ ಕಡಿಮೆ ಇದೆ. ಮೊದಲ ದಿನ ಭಾರತ 90 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸುವ ಮೂಲಕ ಆರಂಭಿಕ ಮೇಲುಗೈ ಸಾಧಿಸಿದೆ.

ಕನ್ನಡಿಗ ಕೆ. ಎಲ್. ರಾಹುಲ್ 248 ರನ್  ಎಸೆತಗಳಲ್ಲಿ ಆಕರ್ಷಕ 122 ರನ್ ಗಳಿಸಿದರೆ, ಅಜಿಂಕ್ಯ ರಹಾನೆ 81 ಎಸೆತಗಳಲ್ಲಿ 40 ರನ್ ಗಳಿಸಿ, ಕ್ರೀಸ್ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT