ಲಂಕಾ ತಂಡ 
ಕ್ರಿಕೆಟ್

ಶ್ರೀಲಂಕಾ-ಭಾರತ ಕ್ರಿಕೆಟ್ ಸರಣಿಗೆ ಕೋವಿಡ್ ಕರಿನೆರಳು: ಡೇಟಾ ವಿಶ್ಲೇಷಕರಿಗೆ ಸೋಂಕು ದೃಢ!

ಶ್ರೀಲಂಕಾ ಕ್ರಿಕೆಟ್ ತಂಡದ ಡಾಟಾ ವಿಶ್ಲೇಷಕ ಜಿಟಿ ನಿರೋಶನ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಲಂಕಾದಲ್ಲೇ ನಡೆಯಲಿರುವ ಶ್ರೀಲಂಕಾ- ಭಾರತ ನಡುವಿನ ನಿಯಮಿತ ಓವರ್ ಗಳ ಸರಣಿಗೆ ಕರಿನೆರಳು ಆವರಿಸಿದೆ. 

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಡೇಟಾ ವಿಶ್ಲೇಷಕ ಜಿಟಿ ನಿರೋಶನ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಲಂಕಾದಲ್ಲೇ ನಡೆಯಲಿರುವ ಶ್ರೀಲಂಕಾ- ಭಾರತ ನಡುವಿನ ನಿಯಮಿತ ಓವರ್ ಗಳ ಸರಣಿಗೆ ಕರಿನೆರಳು ಆವರಿಸಿದೆ. 

ಶ್ರೀಲಂಕಾ ಕ್ರಿಕೆಟ್ ಮಂಡಳಿ ಜು.09 ರಂದು ಈ ವಿಷಯವನ್ನು ಸ್ಪಷ್ಟಪಡಿಸಿದ್ದು, "ತಂಡದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಗೆ ಕೋವಿಡ್ ಸೋಂಕು ತಗುಲಿದ ಬೆನ್ನಲ್ಲೇ ತಂಡದ ಡಾಟಾ ವಿಶ್ಲೇಷಕರಿಗೂ ಕೋವಿಡ್-19 ಸೋಂಕು ತಗುಲಿದ್ದು ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಹೇಳಿದೆ. 

ರಾಷ್ಟ್ರೀಯ ಆಟಗಾರರು, ಕೋಚ್, ಸಹಾಯಕ ಸಿಬ್ಬಂದಿಗಳಿಗೆ ನಡೆಸಿದ ಪಿಸಿಆರ್ ಪರೀಕ್ಷೆ ವರದಿಯಲ್ಲಿ ಕೊರೋನಾ ಸೋಂಕು ಡೇಟಾ ವಿಶ್ಲೇಷಕರಿಗೆ ತಗುಲಿರುವುದು ದೃಢಪಟ್ಟಿದೆ. 

ಇಂಗ್ಲೆಂಡ್ ಪ್ರವಾಸ ಮುಕ್ತಾಯಗೊಳಿಸಿದ್ದ ಲಂಕಾ ತಂಡ ತವರಿಗೆ ಆಗಮಿಸಿದ 48 ಗಂಟೆಗಳಲ್ಲಿಯೇ ಬ್ಯಾಟಿಂಗ್ ಕೋಚ್ ಗೆ  ಸೋಂಕು ದೃಢಪಟ್ಟಿತ್ತು. ಭಾರತ-ಲಂಕಾ ನಡುವಿನ ಸರಣಿ ಪ್ರಾರಂಭವಾಗುವುದಕ್ಕೆ ಒಂದು ವಾರಕ್ಕೂ ಕಡಿಮೆ ಅವಧಿ ಇದೆ. ಕ್ವಾರಂಟೈನ್ ನಲ್ಲಿರುವ ಇತರ ಆಟಗಾರರಿಗೂ ಟೆಸ್ಟ್ ಮಾಡಿಸಲಾಗಿದೆ. ಲಂಕಾ-ಭಾರತದ ನಡುವೆ ಜು.13 ರಿಂದ ಏಕದಿನ ಸರಣಿ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT